ಸ್ಫೋಟಕ ಬ್ಯಾಟ್ಸ್‌ಮನ್‌ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ

ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಹಾಗೂ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಈಗಾಗಲೇ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ಇದೀಗ ಏಕದಿನ ಮಾದರಿಯಲ್ಲಿ ಮಾತ್ರ ದೇಶದ ಪರವಾಗಿ ಸ್ಫೋಟಕ ಬ್ಯಾಟ್ಸ್‌ಮನ್‌ ಅಬ್ಬರಿಸಲಿದ್ದಾರೆ.

ಟೆಸ್ಟ್ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ರೋಹಿತ್, 67 ಟೆಸ್ಟ್‌ಗಳಲ್ಲಿ 40.57 ಸರಾಸರಿಯಲ್ಲಿ 4301 ರನ್ ಗಳಿಸಿದ್ದಾರೆ. ಇದರಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳಿವೆ.

ರೋಹಿತ್ ಶರ್ಮಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, “ಎಲ್ಲರಿಗೂ ನಮಸ್ಕಾರ, ನಾನು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಹೇಳಲು ಇಷ್ಟಪಡುತ್ತೇನೆ. ಬಿಳಿ ಬಣ್ಣದ ಜೆರ್ಸಿಯಲ್ಲಿ ನನ್ನ ದೇಶವನ್ನು ಪ್ರತಿನಿಧಿಸುವುದು ಒಂದು ದೊಡ್ಡ ಗೌರವ. ವರ್ಷಗಳಿಂದ ನೀವು ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಒಡಿಐ ಮಾದರಿಯಲ್ಲಿ ಭಾರತವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ,” ಎಂದು ರೋಹಿತ್ ಶರ್ಮಾ ಬರೆದುಕೊಂಡಿದ್ದಾರೆ.

ರೋಹಿತ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡಕ್ಕೆ ಹೊಸ ಟೆಸ್ಟ್ ನಾಯಕ ಸಿಗುತ್ತಾರೆ ಎಂಬುದು ಸ್ಪಷ್ಟವಾಗಿದೆ. ಈ ರೇಸ್‌ನಲ್ಲಿ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ರಿಷಭ್ ಪಂತ್ ಮುಂಚೂಣಿಯಲ್ಲಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

9 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

19 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

19 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago