ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಹಾಗೂ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಈಗಾಗಲೇ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದು, ಇದೀಗ ಏಕದಿನ ಮಾದರಿಯಲ್ಲಿ ಮಾತ್ರ ದೇಶದ ಪರವಾಗಿ ಸ್ಫೋಟಕ ಬ್ಯಾಟ್ಸ್ಮನ್ ಅಬ್ಬರಿಸಲಿದ್ದಾರೆ.
ಟೆಸ್ಟ್ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್ಮನ್ ರೋಹಿತ್, 67 ಟೆಸ್ಟ್ಗಳಲ್ಲಿ 40.57 ಸರಾಸರಿಯಲ್ಲಿ 4301 ರನ್ ಗಳಿಸಿದ್ದಾರೆ. ಇದರಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳಿವೆ.
ರೋಹಿತ್ ಶರ್ಮಾ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, “ಎಲ್ಲರಿಗೂ ನಮಸ್ಕಾರ, ನಾನು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಹೇಳಲು ಇಷ್ಟಪಡುತ್ತೇನೆ. ಬಿಳಿ ಬಣ್ಣದ ಜೆರ್ಸಿಯಲ್ಲಿ ನನ್ನ ದೇಶವನ್ನು ಪ್ರತಿನಿಧಿಸುವುದು ಒಂದು ದೊಡ್ಡ ಗೌರವ. ವರ್ಷಗಳಿಂದ ನೀವು ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಒಡಿಐ ಮಾದರಿಯಲ್ಲಿ ಭಾರತವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ,” ಎಂದು ರೋಹಿತ್ ಶರ್ಮಾ ಬರೆದುಕೊಂಡಿದ್ದಾರೆ.
ರೋಹಿತ್ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾದ ನಂತರ, ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡಕ್ಕೆ ಹೊಸ ಟೆಸ್ಟ್ ನಾಯಕ ಸಿಗುತ್ತಾರೆ ಎಂಬುದು ಸ್ಪಷ್ಟವಾಗಿದೆ. ಈ ರೇಸ್ನಲ್ಲಿ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ರಿಷಭ್ ಪಂತ್ ಮುಂಚೂಣಿಯಲ್ಲಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…