ಡಾ.ಬಿ.ಅರ್ ಅಂಬೇಡ್ಕರ್ ರವರ 68ನೇ ಪರಿನಿಬ್ಬಾಣದ ಅಂಗವಾಗಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದ ರೋಜಿಪುರ ಸ್ಮಶಾನದಲ್ಲಿ ಬಿರಿಯಾನಿ ಊಟ ಮಾಡಿ ಮೌಢ್ಯವಿರೋಧಿ ದಿನಾಚರಣೆಯನ್ನು ಮಾಡಲಾಯಿತು.
ಮೌಢ್ಯವಿರೋಧಿ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ಪ್ರಕಾಶ್ ಮಂಟೆದ ಭಾಗವಹಿಸಿ ಮಾತನಾಡಿದ ಅವರು, ಜನನ ಹಿಂದಿನ ಕಾಲದಿಂದಲೂ ಮೌಢ್ಯತೆ ಎಂಬುದು ಚಾಲ್ತಿಯಲ್ಲಿದೆ. ಇಂದಿನ ಆಧುನಿಕ ನಾಗರಿಕ ಸಮಾಜ ಹೆಚ್ಚು ಮೌಢ್ಯವನ್ನ ಅನುಸರಿಸುತ್ತಿರುವುದು ನೋವಿನ ಸಂಗತಿ. ಮೌಢ್ಯತೆ ಇವತ್ತು ಫ್ಯಾಷಿನೇಶ್ ಆಗುತ್ತಿದೆ. ಸಾಮಾಜಿಕ ತಂತ್ರಜ್ಞಾನ ಸಹ ಮೌಢ್ಯತೆಯನ್ನ ಬಿತ್ತುವ ಮಾಧ್ಯಮಗಳಾಗಿವೆ. ಇದರಿಂದ ಮತ್ತೆ ಸಮಾಜ ಮೌಢ್ಯತೆಯ ಕಡೆ ಹೊರಳುತ್ತಿದೆ. ಮೌಢ್ಯ ಹೋಗಲಾಡಿಸಿ ವೈಚಾರಿಕ ಪ್ರಜ್ಞೆ ಜನರಲ್ಲಿ ಬಿತ್ತಲು ಮೌಢ್ಯ ವಿರೋಧಿ ದಿನಾಚರಣೆಯಂತಹ ಕಾರ್ಯಕ್ರಮಗಳು ನಡೆಯುತ್ತಿವೆ. ಜನರಲ್ಲಿ ಅರಿವು ಮತ್ತು ಪ್ರಜ್ಞೆಯನ್ನ ಬಿತ್ತಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
ಸಮಾಜದ ಆರೋಗ್ಯವನ್ನ ಕಾಪಾಡಬೇಕು. ಅಜ್ಞಾನವನ್ನ ತೊಲಗಿಸಬೇಕೆಂಬ ಕಾರಣಕ್ಕೆ ಸಮಾನ ಮನಸ್ಕರು ಸೇರಿ ಪ್ರತಿ ವರ್ಷ ಈ ಮೌಢ್ಯ ವಿರೋಧಿ ದಿನಾಚರಣೆ ಮಾಡಲಾಗುತ್ತಿದೆ. ಮೌಢ್ಯತೆಯಿಂದ ದೂರವಾಗಿ ಶೂನ್ಯತ್ವದ ಕಡೆ ಹೋಗುವುದನ್ನೇ ಬೌದ್ಧ ದಮ್ಮದಲ್ಲಿ ಪರಿನಿಬ್ಬಾಣ ಎಂದು ಕರೆಯಲಾಗುತ್ತದೆ ಎಂದರು.
ಉದ್ಯಮಿ ರಾಜ್ ಗೋಪಾಲ್ ಮಾತನಾಡಿ, ಹಲವು ರೀತಿಯ ಮೌಢ್ಯತೆಗಳಿಗೆ ನಮಗೆ ಅರಿವಿಲ್ಲದೆಯೇ ನಾವು ಬಲಿಯಾಗಿದ್ದೇವೆ, ಆಧುನಿಕ ಕಾಲದಲ್ಲಿ ವಿಜ್ಞಾನ- ತಂತ್ರಜ್ಞಾನವು ಎಷ್ಟೇ ಮುಂದುವರೆದಿದ್ದರು ಸಹ ಇಂದಿಗೂ ಮೌಡ್ಯತೆ ನಂಬುವ, ಪಾಲಿಸುವ ಯುವ ಸಮುದಾಯ ನಮೊಟ್ಟಿಗಿರುವುದು ವಿಪರ್ಯಾಸವೇ ಸರಿ, ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಯುವ ಸಮುದಾಯವನ್ನು ಎಚ್ಚರಿಸುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿಯಪ್ಪ , ಸಂಜೀವ್ ನಾಯಕ , ಸೊಣ್ಣಪನಹಳ್ಳಿ ರಮೇಶ್, ವಿ.ವೆಂಕಟೇಶ್, ಅಶೋಕ, ಮುನಿರಾಜು, ಮಲ್ಲರಾಜು, ರಾಜಣ್ಣ ಏಕಾಶಿಪುರ, ತಳಗವಾರ ಪುನೀತ್, ತಳಗವಾರ ಸುರೇಶ್, ವಡ್ಡರಹಳ್ಳಿ ರಾಜಶೇಖರ್, ರತ್ನಮ್ಮ, ಗುರುಪ್ರಸಾದ್, ಹನುಮಣ್ಣ, ರಾಜುಸಣ್ಣಕ್ಕಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
View Comments
ಸರಿ ಇಲ್ಲದ ಮಾಡುವುದು ಸರಿಯೆ ಆದರೆ ಈ ದೇಶದ ಮೊದಲು ನಮ್ಮ ದಲಿತರು ಜನಗಳು ಒಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅದೇ ಮಡಿಕೆ ಅದೇ ಪರಕೆ ಹಿಡಿಯಬೇಕಾಗುತ್ತದೆ ದಯವಿಟ್ಟು ಎಚ್ಚೆತ್ತುಕೊಳ್ಳಿ ನಾವು ಜೈ ಭೀಮ್ ಮಕ್ಕಳು ಸರ್ ರಮೇಶ್ ಎನ್ ಎಂ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಪೋಸ್ಟ್ ನಾಗನಾಯಕನಹಳ್ಳಿ ಗ್ರಾಮ 7829098967 ನಮ್ಮ ಕರ್ನಾಟಕದಲ್ಲಿ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ನಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಸಾಹೇಬರ ಪುತ್ಥಳಿ ಶಂಕುಸ್ಥಾಪನೆ ನೆರವೇರಿಸಿ ಎಂದು ನಿಮ್ಮಲ್ಲಿ ಮನವರಿಕೆ ಮಾಡುತ್ತೇವೆ ಸರ್