ಸ್ಮಶಾನದಲ್ಲಿ ಬಿಸಿ ಬಿಸಿ ಬಿರಿಯಾನಿ ಊಟ ಸವಿದು ಮೌಢ್ಯಕ್ಕೆ ಸೆಡ್ಡು

ಡಾ.ಬಿ.ಅರ್ ಅಂಬೇಡ್ಕರ್ ರವರ 68ನೇ ಪರಿನಿಬ್ಬಾಣದ  ಅಂಗವಾಗಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದ ರೋಜಿಪುರ ಸ್ಮಶಾನದಲ್ಲಿ ಬಿರಿಯಾನಿ ಊಟ ಮಾಡಿ ಮೌಢ್ಯವಿರೋಧಿ ದಿನಾಚರಣೆಯನ್ನು ಮಾಡಲಾಯಿತು.

ಮೌಢ್ಯವಿರೋಧಿ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ಪ್ರಕಾಶ್ ಮಂಟೆದ ಭಾಗವಹಿಸಿ ಮಾತನಾಡಿದ ಅವರು, ಜನನ ಹಿಂದಿನ ಕಾಲದಿಂದಲೂ ಮೌಢ್ಯತೆ ಎಂಬುದು ಚಾಲ್ತಿಯಲ್ಲಿದೆ. ಇಂದಿನ ಆಧುನಿಕ ನಾಗರಿಕ ಸಮಾಜ ಹೆಚ್ಚು ಮೌಢ್ಯವನ್ನ ಅನುಸರಿಸುತ್ತಿರುವುದು ನೋವಿನ ಸಂಗತಿ. ಮೌಢ್ಯತೆ ಇವತ್ತು ಫ್ಯಾಷಿನೇಶ್ ಆಗುತ್ತಿದೆ. ಸಾಮಾಜಿಕ ತಂತ್ರಜ್ಞಾನ ಸಹ ಮೌಢ್ಯತೆಯನ್ನ ಬಿತ್ತುವ ಮಾಧ್ಯಮಗಳಾಗಿವೆ. ಇದರಿಂದ ಮತ್ತೆ ಸಮಾಜ ಮೌಢ್ಯತೆಯ ಕಡೆ ಹೊರಳುತ್ತಿದೆ. ಮೌಢ್ಯ ಹೋಗಲಾಡಿಸಿ ವೈಚಾರಿಕ ಪ್ರಜ್ಞೆ ಜನರಲ್ಲಿ ಬಿತ್ತಲು ಮೌಢ್ಯ ವಿರೋಧಿ ದಿನಾಚರಣೆಯಂತಹ ಕಾರ್ಯಕ್ರಮಗಳು ನಡೆಯುತ್ತಿವೆ. ಜನರಲ್ಲಿ ಅರಿವು ಮತ್ತು ಪ್ರಜ್ಞೆಯನ್ನ ಬಿತ್ತಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಸಮಾಜದ ಆರೋಗ್ಯವನ್ನ ಕಾಪಾಡಬೇಕು. ಅಜ್ಞಾನವನ್ನ ತೊಲಗಿಸಬೇಕೆಂಬ ಕಾರಣಕ್ಕೆ ಸಮಾನ ಮನಸ್ಕರು ಸೇರಿ ಪ್ರತಿ ವರ್ಷ ಈ ಮೌಢ್ಯ ವಿರೋಧಿ ದಿನಾಚರಣೆ ಮಾಡಲಾಗುತ್ತಿದೆ. ಮೌಢ್ಯತೆಯಿಂದ ದೂರವಾಗಿ ಶೂನ್ಯತ್ವದ ಕಡೆ ಹೋಗುವುದನ್ನೇ ಬೌದ್ಧ ದಮ್ಮದಲ್ಲಿ ಪರಿನಿಬ್ಬಾಣ ಎಂದು ಕರೆಯಲಾಗುತ್ತದೆ ಎಂದರು.

ಉದ್ಯಮಿ ರಾಜ್ ಗೋಪಾಲ್ ಮಾತನಾಡಿ, ಹಲವು ರೀತಿಯ ಮೌಢ್ಯತೆಗಳಿಗೆ ನಮಗೆ ಅರಿವಿಲ್ಲದೆಯೇ ನಾವು ಬಲಿಯಾಗಿದ್ದೇವೆ, ಆಧುನಿಕ ಕಾಲದಲ್ಲಿ ವಿಜ್ಞಾನ- ತಂತ್ರಜ್ಞಾನವು ಎಷ್ಟೇ ಮುಂದುವರೆದಿದ್ದರು ಸಹ ಇಂದಿಗೂ ಮೌಡ್ಯತೆ ನಂಬುವ, ಪಾಲಿಸುವ ಯುವ ಸಮುದಾಯ ನಮೊಟ್ಟಿಗಿರುವುದು ವಿಪರ್ಯಾಸವೇ ಸರಿ, ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ  ಯುವ ಸಮುದಾಯವನ್ನು ಎಚ್ಚರಿಸುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿಯಪ್ಪ , ಸಂಜೀವ್ ನಾಯಕ , ಸೊಣ್ಣಪನಹಳ್ಳಿ ರಮೇಶ್, ವಿ.ವೆಂಕಟೇಶ್, ಅಶೋಕ, ಮುನಿರಾಜು, ಮಲ್ಲರಾಜು, ರಾಜಣ್ಣ ಏಕಾಶಿಪುರ, ತಳಗವಾರ ಪುನೀತ್, ತಳಗವಾರ ಸುರೇಶ್, ವಡ್ಡರಹಳ್ಳಿ ರಾಜಶೇಖರ್, ರತ್ನಮ್ಮ, ಗುರುಪ್ರಸಾದ್, ಹನುಮಣ್ಣ, ರಾಜುಸಣ್ಣಕ್ಕಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

View Comments

  • ಸರಿ ಇಲ್ಲದ ಮಾಡುವುದು ಸರಿಯೆ ಆದರೆ ಈ ದೇಶದ ಮೊದಲು ನಮ್ಮ ದಲಿತರು ಜನಗಳು ಒಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅದೇ ಮಡಿಕೆ ಅದೇ ಪರಕೆ ಹಿಡಿಯಬೇಕಾಗುತ್ತದೆ ದಯವಿಟ್ಟು ಎಚ್ಚೆತ್ತುಕೊಳ್ಳಿ ನಾವು ಜೈ ಭೀಮ್ ಮಕ್ಕಳು ಸರ್ ರಮೇಶ್ ಎನ್ ಎಂ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಪೋಸ್ಟ್ ನಾಗನಾಯಕನಹಳ್ಳಿ ಗ್ರಾಮ 7829098967 ನಮ್ಮ ಕರ್ನಾಟಕದಲ್ಲಿ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ನಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಸಾಹೇಬರ ಪುತ್ಥಳಿ ಶಂಕುಸ್ಥಾಪನೆ ನೆರವೇರಿಸಿ ಎಂದು ನಿಮ್ಮಲ್ಲಿ ಮನವರಿಕೆ ಮಾಡುತ್ತೇವೆ ಸರ್

Recent Posts

ಚರಂಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..!

ಚರಂಡಿಯಲ್ಲಿ‌ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…

3 hours ago

ಮಾ.6ರಂದು ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ: ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹ

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…

6 hours ago

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

9 hours ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

21 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

22 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

22 hours ago