ಸ್ಮಶಾನದಲ್ಲಿ ಬಿಸಿ ಬಿಸಿ ಬಿರಿಯಾನಿ ಊಟ ಸವಿದು ಮೌಢ್ಯಕ್ಕೆ ಸೆಡ್ಡು

ಡಾ.ಬಿ.ಅರ್ ಅಂಬೇಡ್ಕರ್ ರವರ 68ನೇ ಪರಿನಿಬ್ಬಾಣದ  ಅಂಗವಾಗಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದ ರೋಜಿಪುರ ಸ್ಮಶಾನದಲ್ಲಿ ಬಿರಿಯಾನಿ ಊಟ ಮಾಡಿ ಮೌಢ್ಯವಿರೋಧಿ ದಿನಾಚರಣೆಯನ್ನು ಮಾಡಲಾಯಿತು.

ಮೌಢ್ಯವಿರೋಧಿ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ಪ್ರಕಾಶ್ ಮಂಟೆದ ಭಾಗವಹಿಸಿ ಮಾತನಾಡಿದ ಅವರು, ಜನನ ಹಿಂದಿನ ಕಾಲದಿಂದಲೂ ಮೌಢ್ಯತೆ ಎಂಬುದು ಚಾಲ್ತಿಯಲ್ಲಿದೆ. ಇಂದಿನ ಆಧುನಿಕ ನಾಗರಿಕ ಸಮಾಜ ಹೆಚ್ಚು ಮೌಢ್ಯವನ್ನ ಅನುಸರಿಸುತ್ತಿರುವುದು ನೋವಿನ ಸಂಗತಿ. ಮೌಢ್ಯತೆ ಇವತ್ತು ಫ್ಯಾಷಿನೇಶ್ ಆಗುತ್ತಿದೆ. ಸಾಮಾಜಿಕ ತಂತ್ರಜ್ಞಾನ ಸಹ ಮೌಢ್ಯತೆಯನ್ನ ಬಿತ್ತುವ ಮಾಧ್ಯಮಗಳಾಗಿವೆ. ಇದರಿಂದ ಮತ್ತೆ ಸಮಾಜ ಮೌಢ್ಯತೆಯ ಕಡೆ ಹೊರಳುತ್ತಿದೆ. ಮೌಢ್ಯ ಹೋಗಲಾಡಿಸಿ ವೈಚಾರಿಕ ಪ್ರಜ್ಞೆ ಜನರಲ್ಲಿ ಬಿತ್ತಲು ಮೌಢ್ಯ ವಿರೋಧಿ ದಿನಾಚರಣೆಯಂತಹ ಕಾರ್ಯಕ್ರಮಗಳು ನಡೆಯುತ್ತಿವೆ. ಜನರಲ್ಲಿ ಅರಿವು ಮತ್ತು ಪ್ರಜ್ಞೆಯನ್ನ ಬಿತ್ತಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಸಮಾಜದ ಆರೋಗ್ಯವನ್ನ ಕಾಪಾಡಬೇಕು. ಅಜ್ಞಾನವನ್ನ ತೊಲಗಿಸಬೇಕೆಂಬ ಕಾರಣಕ್ಕೆ ಸಮಾನ ಮನಸ್ಕರು ಸೇರಿ ಪ್ರತಿ ವರ್ಷ ಈ ಮೌಢ್ಯ ವಿರೋಧಿ ದಿನಾಚರಣೆ ಮಾಡಲಾಗುತ್ತಿದೆ. ಮೌಢ್ಯತೆಯಿಂದ ದೂರವಾಗಿ ಶೂನ್ಯತ್ವದ ಕಡೆ ಹೋಗುವುದನ್ನೇ ಬೌದ್ಧ ದಮ್ಮದಲ್ಲಿ ಪರಿನಿಬ್ಬಾಣ ಎಂದು ಕರೆಯಲಾಗುತ್ತದೆ ಎಂದರು.

ಉದ್ಯಮಿ ರಾಜ್ ಗೋಪಾಲ್ ಮಾತನಾಡಿ, ಹಲವು ರೀತಿಯ ಮೌಢ್ಯತೆಗಳಿಗೆ ನಮಗೆ ಅರಿವಿಲ್ಲದೆಯೇ ನಾವು ಬಲಿಯಾಗಿದ್ದೇವೆ, ಆಧುನಿಕ ಕಾಲದಲ್ಲಿ ವಿಜ್ಞಾನ- ತಂತ್ರಜ್ಞಾನವು ಎಷ್ಟೇ ಮುಂದುವರೆದಿದ್ದರು ಸಹ ಇಂದಿಗೂ ಮೌಡ್ಯತೆ ನಂಬುವ, ಪಾಲಿಸುವ ಯುವ ಸಮುದಾಯ ನಮೊಟ್ಟಿಗಿರುವುದು ವಿಪರ್ಯಾಸವೇ ಸರಿ, ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ  ಯುವ ಸಮುದಾಯವನ್ನು ಎಚ್ಚರಿಸುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿಯಪ್ಪ , ಸಂಜೀವ್ ನಾಯಕ , ಸೊಣ್ಣಪನಹಳ್ಳಿ ರಮೇಶ್, ವಿ.ವೆಂಕಟೇಶ್, ಅಶೋಕ, ಮುನಿರಾಜು, ಮಲ್ಲರಾಜು, ರಾಜಣ್ಣ ಏಕಾಶಿಪುರ, ತಳಗವಾರ ಪುನೀತ್, ತಳಗವಾರ ಸುರೇಶ್, ವಡ್ಡರಹಳ್ಳಿ ರಾಜಶೇಖರ್, ರತ್ನಮ್ಮ, ಗುರುಪ್ರಸಾದ್, ಹನುಮಣ್ಣ, ರಾಜುಸಣ್ಣಕ್ಕಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

View Comments

  • ಸರಿ ಇಲ್ಲದ ಮಾಡುವುದು ಸರಿಯೆ ಆದರೆ ಈ ದೇಶದ ಮೊದಲು ನಮ್ಮ ದಲಿತರು ಜನಗಳು ಒಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅದೇ ಮಡಿಕೆ ಅದೇ ಪರಕೆ ಹಿಡಿಯಬೇಕಾಗುತ್ತದೆ ದಯವಿಟ್ಟು ಎಚ್ಚೆತ್ತುಕೊಳ್ಳಿ ನಾವು ಜೈ ಭೀಮ್ ಮಕ್ಕಳು ಸರ್ ರಮೇಶ್ ಎನ್ ಎಂ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಪೋಸ್ಟ್ ನಾಗನಾಯಕನಹಳ್ಳಿ ಗ್ರಾಮ 7829098967 ನಮ್ಮ ಕರ್ನಾಟಕದಲ್ಲಿ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ನಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಸಾಹೇಬರ ಪುತ್ಥಳಿ ಶಂಕುಸ್ಥಾಪನೆ ನೆರವೇರಿಸಿ ಎಂದು ನಿಮ್ಮಲ್ಲಿ ಮನವರಿಕೆ ಮಾಡುತ್ತೇವೆ ಸರ್

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago