ಸ್ಮಶಾನದಲ್ಲಿ ಬಿಸಿ ಬಿಸಿ ಬಿರಿಯಾನಿ ಊಟ ಸವಿದು ಮೌಢ್ಯಕ್ಕೆ ಸೆಡ್ಡು

ಡಾ.ಬಿ.ಅರ್ ಅಂಬೇಡ್ಕರ್ ರವರ 68ನೇ ಪರಿನಿಬ್ಬಾಣದ  ಅಂಗವಾಗಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದ ರೋಜಿಪುರ ಸ್ಮಶಾನದಲ್ಲಿ ಬಿರಿಯಾನಿ ಊಟ ಮಾಡಿ ಮೌಢ್ಯವಿರೋಧಿ ದಿನಾಚರಣೆಯನ್ನು ಮಾಡಲಾಯಿತು.

ಮೌಢ್ಯವಿರೋಧಿ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ಪ್ರಕಾಶ್ ಮಂಟೆದ ಭಾಗವಹಿಸಿ ಮಾತನಾಡಿದ ಅವರು, ಜನನ ಹಿಂದಿನ ಕಾಲದಿಂದಲೂ ಮೌಢ್ಯತೆ ಎಂಬುದು ಚಾಲ್ತಿಯಲ್ಲಿದೆ. ಇಂದಿನ ಆಧುನಿಕ ನಾಗರಿಕ ಸಮಾಜ ಹೆಚ್ಚು ಮೌಢ್ಯವನ್ನ ಅನುಸರಿಸುತ್ತಿರುವುದು ನೋವಿನ ಸಂಗತಿ. ಮೌಢ್ಯತೆ ಇವತ್ತು ಫ್ಯಾಷಿನೇಶ್ ಆಗುತ್ತಿದೆ. ಸಾಮಾಜಿಕ ತಂತ್ರಜ್ಞಾನ ಸಹ ಮೌಢ್ಯತೆಯನ್ನ ಬಿತ್ತುವ ಮಾಧ್ಯಮಗಳಾಗಿವೆ. ಇದರಿಂದ ಮತ್ತೆ ಸಮಾಜ ಮೌಢ್ಯತೆಯ ಕಡೆ ಹೊರಳುತ್ತಿದೆ. ಮೌಢ್ಯ ಹೋಗಲಾಡಿಸಿ ವೈಚಾರಿಕ ಪ್ರಜ್ಞೆ ಜನರಲ್ಲಿ ಬಿತ್ತಲು ಮೌಢ್ಯ ವಿರೋಧಿ ದಿನಾಚರಣೆಯಂತಹ ಕಾರ್ಯಕ್ರಮಗಳು ನಡೆಯುತ್ತಿವೆ. ಜನರಲ್ಲಿ ಅರಿವು ಮತ್ತು ಪ್ರಜ್ಞೆಯನ್ನ ಬಿತ್ತಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಸಮಾಜದ ಆರೋಗ್ಯವನ್ನ ಕಾಪಾಡಬೇಕು. ಅಜ್ಞಾನವನ್ನ ತೊಲಗಿಸಬೇಕೆಂಬ ಕಾರಣಕ್ಕೆ ಸಮಾನ ಮನಸ್ಕರು ಸೇರಿ ಪ್ರತಿ ವರ್ಷ ಈ ಮೌಢ್ಯ ವಿರೋಧಿ ದಿನಾಚರಣೆ ಮಾಡಲಾಗುತ್ತಿದೆ. ಮೌಢ್ಯತೆಯಿಂದ ದೂರವಾಗಿ ಶೂನ್ಯತ್ವದ ಕಡೆ ಹೋಗುವುದನ್ನೇ ಬೌದ್ಧ ದಮ್ಮದಲ್ಲಿ ಪರಿನಿಬ್ಬಾಣ ಎಂದು ಕರೆಯಲಾಗುತ್ತದೆ ಎಂದರು.

ಉದ್ಯಮಿ ರಾಜ್ ಗೋಪಾಲ್ ಮಾತನಾಡಿ, ಹಲವು ರೀತಿಯ ಮೌಢ್ಯತೆಗಳಿಗೆ ನಮಗೆ ಅರಿವಿಲ್ಲದೆಯೇ ನಾವು ಬಲಿಯಾಗಿದ್ದೇವೆ, ಆಧುನಿಕ ಕಾಲದಲ್ಲಿ ವಿಜ್ಞಾನ- ತಂತ್ರಜ್ಞಾನವು ಎಷ್ಟೇ ಮುಂದುವರೆದಿದ್ದರು ಸಹ ಇಂದಿಗೂ ಮೌಡ್ಯತೆ ನಂಬುವ, ಪಾಲಿಸುವ ಯುವ ಸಮುದಾಯ ನಮೊಟ್ಟಿಗಿರುವುದು ವಿಪರ್ಯಾಸವೇ ಸರಿ, ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ  ಯುವ ಸಮುದಾಯವನ್ನು ಎಚ್ಚರಿಸುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿಯಪ್ಪ , ಸಂಜೀವ್ ನಾಯಕ , ಸೊಣ್ಣಪನಹಳ್ಳಿ ರಮೇಶ್, ವಿ.ವೆಂಕಟೇಶ್, ಅಶೋಕ, ಮುನಿರಾಜು, ಮಲ್ಲರಾಜು, ರಾಜಣ್ಣ ಏಕಾಶಿಪುರ, ತಳಗವಾರ ಪುನೀತ್, ತಳಗವಾರ ಸುರೇಶ್, ವಡ್ಡರಹಳ್ಳಿ ರಾಜಶೇಖರ್, ರತ್ನಮ್ಮ, ಗುರುಪ್ರಸಾದ್, ಹನುಮಣ್ಣ, ರಾಜುಸಣ್ಣಕ್ಕಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

View Comments

  • ಸರಿ ಇಲ್ಲದ ಮಾಡುವುದು ಸರಿಯೆ ಆದರೆ ಈ ದೇಶದ ಮೊದಲು ನಮ್ಮ ದಲಿತರು ಜನಗಳು ಒಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅದೇ ಮಡಿಕೆ ಅದೇ ಪರಕೆ ಹಿಡಿಯಬೇಕಾಗುತ್ತದೆ ದಯವಿಟ್ಟು ಎಚ್ಚೆತ್ತುಕೊಳ್ಳಿ ನಾವು ಜೈ ಭೀಮ್ ಮಕ್ಕಳು ಸರ್ ರಮೇಶ್ ಎನ್ ಎಂ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಪೋಸ್ಟ್ ನಾಗನಾಯಕನಹಳ್ಳಿ ಗ್ರಾಮ 7829098967 ನಮ್ಮ ಕರ್ನಾಟಕದಲ್ಲಿ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ನಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಸಾಹೇಬರ ಪುತ್ಥಳಿ ಶಂಕುಸ್ಥಾಪನೆ ನೆರವೇರಿಸಿ ಎಂದು ನಿಮ್ಮಲ್ಲಿ ಮನವರಿಕೆ ಮಾಡುತ್ತೇವೆ ಸರ್

Recent Posts

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

8 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

11 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

16 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

17 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

2 days ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 days ago