ಸ್ಮಶಾನದಲ್ಲಿ ಬಿಸಿ ಬಿಸಿ ಬಿರಿಯಾನಿ ಊಟ ಸವಿದು ಮೌಢ್ಯಕ್ಕೆ ಸೆಡ್ಡು

ಡಾ.ಬಿ.ಅರ್ ಅಂಬೇಡ್ಕರ್ ರವರ 68ನೇ ಪರಿನಿಬ್ಬಾಣದ  ಅಂಗವಾಗಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದ ರೋಜಿಪುರ ಸ್ಮಶಾನದಲ್ಲಿ ಬಿರಿಯಾನಿ ಊಟ ಮಾಡಿ ಮೌಢ್ಯವಿರೋಧಿ ದಿನಾಚರಣೆಯನ್ನು ಮಾಡಲಾಯಿತು.

ಮೌಢ್ಯವಿರೋಧಿ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ಪ್ರಕಾಶ್ ಮಂಟೆದ ಭಾಗವಹಿಸಿ ಮಾತನಾಡಿದ ಅವರು, ಜನನ ಹಿಂದಿನ ಕಾಲದಿಂದಲೂ ಮೌಢ್ಯತೆ ಎಂಬುದು ಚಾಲ್ತಿಯಲ್ಲಿದೆ. ಇಂದಿನ ಆಧುನಿಕ ನಾಗರಿಕ ಸಮಾಜ ಹೆಚ್ಚು ಮೌಢ್ಯವನ್ನ ಅನುಸರಿಸುತ್ತಿರುವುದು ನೋವಿನ ಸಂಗತಿ. ಮೌಢ್ಯತೆ ಇವತ್ತು ಫ್ಯಾಷಿನೇಶ್ ಆಗುತ್ತಿದೆ. ಸಾಮಾಜಿಕ ತಂತ್ರಜ್ಞಾನ ಸಹ ಮೌಢ್ಯತೆಯನ್ನ ಬಿತ್ತುವ ಮಾಧ್ಯಮಗಳಾಗಿವೆ. ಇದರಿಂದ ಮತ್ತೆ ಸಮಾಜ ಮೌಢ್ಯತೆಯ ಕಡೆ ಹೊರಳುತ್ತಿದೆ. ಮೌಢ್ಯ ಹೋಗಲಾಡಿಸಿ ವೈಚಾರಿಕ ಪ್ರಜ್ಞೆ ಜನರಲ್ಲಿ ಬಿತ್ತಲು ಮೌಢ್ಯ ವಿರೋಧಿ ದಿನಾಚರಣೆಯಂತಹ ಕಾರ್ಯಕ್ರಮಗಳು ನಡೆಯುತ್ತಿವೆ. ಜನರಲ್ಲಿ ಅರಿವು ಮತ್ತು ಪ್ರಜ್ಞೆಯನ್ನ ಬಿತ್ತಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಸಮಾಜದ ಆರೋಗ್ಯವನ್ನ ಕಾಪಾಡಬೇಕು. ಅಜ್ಞಾನವನ್ನ ತೊಲಗಿಸಬೇಕೆಂಬ ಕಾರಣಕ್ಕೆ ಸಮಾನ ಮನಸ್ಕರು ಸೇರಿ ಪ್ರತಿ ವರ್ಷ ಈ ಮೌಢ್ಯ ವಿರೋಧಿ ದಿನಾಚರಣೆ ಮಾಡಲಾಗುತ್ತಿದೆ. ಮೌಢ್ಯತೆಯಿಂದ ದೂರವಾಗಿ ಶೂನ್ಯತ್ವದ ಕಡೆ ಹೋಗುವುದನ್ನೇ ಬೌದ್ಧ ದಮ್ಮದಲ್ಲಿ ಪರಿನಿಬ್ಬಾಣ ಎಂದು ಕರೆಯಲಾಗುತ್ತದೆ ಎಂದರು.

ಉದ್ಯಮಿ ರಾಜ್ ಗೋಪಾಲ್ ಮಾತನಾಡಿ, ಹಲವು ರೀತಿಯ ಮೌಢ್ಯತೆಗಳಿಗೆ ನಮಗೆ ಅರಿವಿಲ್ಲದೆಯೇ ನಾವು ಬಲಿಯಾಗಿದ್ದೇವೆ, ಆಧುನಿಕ ಕಾಲದಲ್ಲಿ ವಿಜ್ಞಾನ- ತಂತ್ರಜ್ಞಾನವು ಎಷ್ಟೇ ಮುಂದುವರೆದಿದ್ದರು ಸಹ ಇಂದಿಗೂ ಮೌಡ್ಯತೆ ನಂಬುವ, ಪಾಲಿಸುವ ಯುವ ಸಮುದಾಯ ನಮೊಟ್ಟಿಗಿರುವುದು ವಿಪರ್ಯಾಸವೇ ಸರಿ, ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ  ಯುವ ಸಮುದಾಯವನ್ನು ಎಚ್ಚರಿಸುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿಯಪ್ಪ , ಸಂಜೀವ್ ನಾಯಕ , ಸೊಣ್ಣಪನಹಳ್ಳಿ ರಮೇಶ್, ವಿ.ವೆಂಕಟೇಶ್, ಅಶೋಕ, ಮುನಿರಾಜು, ಮಲ್ಲರಾಜು, ರಾಜಣ್ಣ ಏಕಾಶಿಪುರ, ತಳಗವಾರ ಪುನೀತ್, ತಳಗವಾರ ಸುರೇಶ್, ವಡ್ಡರಹಳ್ಳಿ ರಾಜಶೇಖರ್, ರತ್ನಮ್ಮ, ಗುರುಪ್ರಸಾದ್, ಹನುಮಣ್ಣ, ರಾಜುಸಣ್ಣಕ್ಕಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

View Comments

  • ಸರಿ ಇಲ್ಲದ ಮಾಡುವುದು ಸರಿಯೆ ಆದರೆ ಈ ದೇಶದ ಮೊದಲು ನಮ್ಮ ದಲಿತರು ಜನಗಳು ಒಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅದೇ ಮಡಿಕೆ ಅದೇ ಪರಕೆ ಹಿಡಿಯಬೇಕಾಗುತ್ತದೆ ದಯವಿಟ್ಟು ಎಚ್ಚೆತ್ತುಕೊಳ್ಳಿ ನಾವು ಜೈ ಭೀಮ್ ಮಕ್ಕಳು ಸರ್ ರಮೇಶ್ ಎನ್ ಎಂ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಪೋಸ್ಟ್ ನಾಗನಾಯಕನಹಳ್ಳಿ ಗ್ರಾಮ 7829098967 ನಮ್ಮ ಕರ್ನಾಟಕದಲ್ಲಿ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ನಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಸಾಹೇಬರ ಪುತ್ಥಳಿ ಶಂಕುಸ್ಥಾಪನೆ ನೆರವೇರಿಸಿ ಎಂದು ನಿಮ್ಮಲ್ಲಿ ಮನವರಿಕೆ ಮಾಡುತ್ತೇವೆ ಸರ್

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago