ಸ್ಮಶಾನದಲ್ಲಿ ಬಿಸಿ ಬಿಸಿ ಬಿರಿಯಾನಿ ಊಟ ಸವಿದು ಮೌಢ್ಯಕ್ಕೆ ಸೆಡ್ಡು

ಡಾ.ಬಿ.ಅರ್ ಅಂಬೇಡ್ಕರ್ ರವರ 68ನೇ ಪರಿನಿಬ್ಬಾಣದ  ಅಂಗವಾಗಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದ ರೋಜಿಪುರ ಸ್ಮಶಾನದಲ್ಲಿ ಬಿರಿಯಾನಿ ಊಟ ಮಾಡಿ ಮೌಢ್ಯವಿರೋಧಿ ದಿನಾಚರಣೆಯನ್ನು ಮಾಡಲಾಯಿತು.

ಮೌಢ್ಯವಿರೋಧಿ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ಪ್ರಕಾಶ್ ಮಂಟೆದ ಭಾಗವಹಿಸಿ ಮಾತನಾಡಿದ ಅವರು, ಜನನ ಹಿಂದಿನ ಕಾಲದಿಂದಲೂ ಮೌಢ್ಯತೆ ಎಂಬುದು ಚಾಲ್ತಿಯಲ್ಲಿದೆ. ಇಂದಿನ ಆಧುನಿಕ ನಾಗರಿಕ ಸಮಾಜ ಹೆಚ್ಚು ಮೌಢ್ಯವನ್ನ ಅನುಸರಿಸುತ್ತಿರುವುದು ನೋವಿನ ಸಂಗತಿ. ಮೌಢ್ಯತೆ ಇವತ್ತು ಫ್ಯಾಷಿನೇಶ್ ಆಗುತ್ತಿದೆ. ಸಾಮಾಜಿಕ ತಂತ್ರಜ್ಞಾನ ಸಹ ಮೌಢ್ಯತೆಯನ್ನ ಬಿತ್ತುವ ಮಾಧ್ಯಮಗಳಾಗಿವೆ. ಇದರಿಂದ ಮತ್ತೆ ಸಮಾಜ ಮೌಢ್ಯತೆಯ ಕಡೆ ಹೊರಳುತ್ತಿದೆ. ಮೌಢ್ಯ ಹೋಗಲಾಡಿಸಿ ವೈಚಾರಿಕ ಪ್ರಜ್ಞೆ ಜನರಲ್ಲಿ ಬಿತ್ತಲು ಮೌಢ್ಯ ವಿರೋಧಿ ದಿನಾಚರಣೆಯಂತಹ ಕಾರ್ಯಕ್ರಮಗಳು ನಡೆಯುತ್ತಿವೆ. ಜನರಲ್ಲಿ ಅರಿವು ಮತ್ತು ಪ್ರಜ್ಞೆಯನ್ನ ಬಿತ್ತಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಸಮಾಜದ ಆರೋಗ್ಯವನ್ನ ಕಾಪಾಡಬೇಕು. ಅಜ್ಞಾನವನ್ನ ತೊಲಗಿಸಬೇಕೆಂಬ ಕಾರಣಕ್ಕೆ ಸಮಾನ ಮನಸ್ಕರು ಸೇರಿ ಪ್ರತಿ ವರ್ಷ ಈ ಮೌಢ್ಯ ವಿರೋಧಿ ದಿನಾಚರಣೆ ಮಾಡಲಾಗುತ್ತಿದೆ. ಮೌಢ್ಯತೆಯಿಂದ ದೂರವಾಗಿ ಶೂನ್ಯತ್ವದ ಕಡೆ ಹೋಗುವುದನ್ನೇ ಬೌದ್ಧ ದಮ್ಮದಲ್ಲಿ ಪರಿನಿಬ್ಬಾಣ ಎಂದು ಕರೆಯಲಾಗುತ್ತದೆ ಎಂದರು.

ಉದ್ಯಮಿ ರಾಜ್ ಗೋಪಾಲ್ ಮಾತನಾಡಿ, ಹಲವು ರೀತಿಯ ಮೌಢ್ಯತೆಗಳಿಗೆ ನಮಗೆ ಅರಿವಿಲ್ಲದೆಯೇ ನಾವು ಬಲಿಯಾಗಿದ್ದೇವೆ, ಆಧುನಿಕ ಕಾಲದಲ್ಲಿ ವಿಜ್ಞಾನ- ತಂತ್ರಜ್ಞಾನವು ಎಷ್ಟೇ ಮುಂದುವರೆದಿದ್ದರು ಸಹ ಇಂದಿಗೂ ಮೌಡ್ಯತೆ ನಂಬುವ, ಪಾಲಿಸುವ ಯುವ ಸಮುದಾಯ ನಮೊಟ್ಟಿಗಿರುವುದು ವಿಪರ್ಯಾಸವೇ ಸರಿ, ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ  ಯುವ ಸಮುದಾಯವನ್ನು ಎಚ್ಚರಿಸುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿಯಪ್ಪ , ಸಂಜೀವ್ ನಾಯಕ , ಸೊಣ್ಣಪನಹಳ್ಳಿ ರಮೇಶ್, ವಿ.ವೆಂಕಟೇಶ್, ಅಶೋಕ, ಮುನಿರಾಜು, ಮಲ್ಲರಾಜು, ರಾಜಣ್ಣ ಏಕಾಶಿಪುರ, ತಳಗವಾರ ಪುನೀತ್, ತಳಗವಾರ ಸುರೇಶ್, ವಡ್ಡರಹಳ್ಳಿ ರಾಜಶೇಖರ್, ರತ್ನಮ್ಮ, ಗುರುಪ್ರಸಾದ್, ಹನುಮಣ್ಣ, ರಾಜುಸಣ್ಣಕ್ಕಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

View Comments

  • ಸರಿ ಇಲ್ಲದ ಮಾಡುವುದು ಸರಿಯೆ ಆದರೆ ಈ ದೇಶದ ಮೊದಲು ನಮ್ಮ ದಲಿತರು ಜನಗಳು ಒಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅದೇ ಮಡಿಕೆ ಅದೇ ಪರಕೆ ಹಿಡಿಯಬೇಕಾಗುತ್ತದೆ ದಯವಿಟ್ಟು ಎಚ್ಚೆತ್ತುಕೊಳ್ಳಿ ನಾವು ಜೈ ಭೀಮ್ ಮಕ್ಕಳು ಸರ್ ರಮೇಶ್ ಎನ್ ಎಂ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಪೋಸ್ಟ್ ನಾಗನಾಯಕನಹಳ್ಳಿ ಗ್ರಾಮ 7829098967 ನಮ್ಮ ಕರ್ನಾಟಕದಲ್ಲಿ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ನಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಸಾಹೇಬರ ಪುತ್ಥಳಿ ಶಂಕುಸ್ಥಾಪನೆ ನೆರವೇರಿಸಿ ಎಂದು ನಿಮ್ಮಲ್ಲಿ ಮನವರಿಕೆ ಮಾಡುತ್ತೇವೆ ಸರ್

Recent Posts

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

57 minutes ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

3 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

21 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

22 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

23 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

23 hours ago