ಸ್ಮಶಾನ ಭೂಮಿ: ಅಹವಾಲುಗಳಿದ್ದಲ್ಲಿ ಡಿಸಿ ಹಾಗೂ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಭೂಮಿಯನ್ನು ಒದಗಿಸಲಾಗಿರುತ್ತದೆ. ಆದರೆ ಕೆಲವು ಗ್ರಾಮಗಳಿಗೆ ಸ್ಮಶಾನ  ಅವಶ್ಯಕತೆ ಇರುವುದಾಗಿ, ಒತ್ತುವರಿಯಾಗಿರುವುದಾಗಿ ಅಥವಾ ರಸ್ತೆ ಸಂಪರ್ಕ ಇಲ್ಲದೇ ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗುತ್ತಿರುತ್ತದೆ ಹಾಗೂ ಹೆಚ್ಚುವರಿ ಸ್ಮಶಾನ ಅವಶ್ಯಕತೆ ಬಗ್ಗೆಯೂ ಸಹಾ ಸಾರ್ವಜನಿಕರಿಂದ ಮತ್ತು ಸಂಘ ಸಂಸ್ಥೆಗಳಿಂದ ಮನವಿಗಳು ಸ್ವೀಕೃತವಾಗುತ್ತಿರುತ್ತವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸ್ಮಶಾನ ಸಮಸ್ಯೆಗಳ ಬಗ್ಗೆ ಹಾಗೂ ಸ್ಮಶಾನಕ್ಕೆ ಜಮೀನು ಮಂಜೂರು ಮಾಡುವ ಬಗ್ಗೆ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಆದ್ಯತೆಯ ಮೇರೆಗೆ ಕ್ರಮಕೈಗೊಳ್ಳಲು ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಸ್ಮಶಾನದ ಅವಶ್ಯಕತೆ ಹಾಗೂ ಸಮಸ್ಯೆಗಳ ಬಗ್ಗೆ ಯಾವುದೇ ಮನವಿಗಳಿದ್ದಲ್ಲಿ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *