ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಭೂಮಿಯನ್ನು ಒದಗಿಸಲಾಗಿರುತ್ತದೆ. ಆದರೆ ಕೆಲವು ಗ್ರಾಮಗಳಿಗೆ ಸ್ಮಶಾನ ಅವಶ್ಯಕತೆ ಇರುವುದಾಗಿ, ಒತ್ತುವರಿಯಾಗಿರುವುದಾಗಿ ಅಥವಾ ರಸ್ತೆ ಸಂಪರ್ಕ ಇಲ್ಲದೇ ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗುತ್ತಿರುತ್ತದೆ ಹಾಗೂ ಹೆಚ್ಚುವರಿ ಸ್ಮಶಾನ ಅವಶ್ಯಕತೆ ಬಗ್ಗೆಯೂ ಸಹಾ ಸಾರ್ವಜನಿಕರಿಂದ ಮತ್ತು ಸಂಘ ಸಂಸ್ಥೆಗಳಿಂದ ಮನವಿಗಳು ಸ್ವೀಕೃತವಾಗುತ್ತಿರುತ್ತವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸ್ಮಶಾನ ಸಮಸ್ಯೆಗಳ ಬಗ್ಗೆ ಹಾಗೂ ಸ್ಮಶಾನಕ್ಕೆ ಜಮೀನು ಮಂಜೂರು ಮಾಡುವ ಬಗ್ಗೆ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಆದ್ಯತೆಯ ಮೇರೆಗೆ ಕ್ರಮಕೈಗೊಳ್ಳಲು ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಸ್ಮಶಾನದ ಅವಶ್ಯಕತೆ ಹಾಗೂ ಸಮಸ್ಯೆಗಳ ಬಗ್ಗೆ ಯಾವುದೇ ಮನವಿಗಳಿದ್ದಲ್ಲಿ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…