ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಬಂಧನ: ‘ಮಾಣಿಕ್ಯ’ ಚಿತ್ರದ ನಟಿಯಿಂದ 15 ಕೆ.ಜಿ ಚಿನ್ನ ವಶ

ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ.

ಸೋಮವಾರ ರಾತ್ರಿ ಎಮಿರೆಟ್ಸ್‌ ಏರ್‌ಲೈನ್ಸ್‌ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ತಪಾಸಣೆ ಮಾಡಿದಾಗ ಅವರ ಬಳಿ 14.80 ಕೆ.ಜಿ ಚಿನ್ನ ಪತ್ತೆಯಾಗಿದೆ.

ವಿಚಾರಣೆಯ ನಂತರ ನಟಿಯನ್ನು ಬಂಧಿಸಿದ ಡಿಆರ್‌ಐ ಅಧಿಕಾರಿಗಳು ಆಕೆಯನ್ನು ಬೆಂಗಳೂರಿನ ಎಚ್‌ಬಿಆರ್‌ ಲೇಔಟ್‌ನಲ್ಲಿರುವ ಡಿಆರ್‌ಐ ಕಚೇರಿಗೆ ಕರೆದೊಯ್ದರು.

ಸುದೀಪ್‌ ನಟಿಸಿರುವ ‘ಮಾಣಿಕ್ಯ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ರನ್ಯಾ ರಾವ್‌, ತಾನು ಡಿಐಜಿ ಡಾ.ಕೆ.ರಾಮಚಂದ್ರರಾವ್‌ ಅವರ ಮಲಮಗಳು ಎಂದು ಪ್ರಾಥಮಿಕ ತನಿಖೆ ವೇಳೆ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದುಬೈನ ಚಿನ್ನ ಕಳ್ಳಸಾಗಣೆ ಜಾಲದಲ್ಲಿ ಕನ್ನಡದ ನಟಿಯೊಬ್ಬರು ಸಕ್ರಿಯರಾಗಿರುವ ಬಗ್ಗೆ ಡಿಆರ್‌ಐ ಅಧಿಕಾರಿಗಳಿಗೆ ಕೆಲವು ದಿನಗಳ ಹಿಂದೆ ಮಾಹಿತಿ ದೊರೆತ್ತಿತ್ತು. ಪದೇ ಪದೇ ದುಬೈಗೆ ಹೋಗಿ ಬರುತ್ತಿದ್ದ ರನ್ಯಾ ಓಡಾಟದ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದರು.

15 ದಿನಗಳಲ್ಲಿ ರನ್ಯಾ ರಾವ್‌ ನಾಲ್ಕು ಬಾರಿ ದುಬೈಗೆ ಹೋಗಿ ಬಂದಿದ್ದರು. ಅಧಿಕಾರಿಗಳು ಸೋಮವಾರ ರಾತ್ರಿ ಆಕೆ ಬರುವುದನ್ನೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದರು. ನಟಿ ಬಂದಿಳಿಯುತ್ತಲೇ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅವರ ಶಂಕೆ ನಿಜವಾಯಿತು.

ವಿಮಾನ ನಿಲ್ದಾಣದಲ್ಲಿಯೇ ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ ನಟಿಯನ್ನು ಬಂಧಿಸಿ ಡಿಆರ್‌ಐ ಕಚೇರಿಗೆ ಕರೆದೊಯ್ದರು.

ಕೋರಮಂಗಲದಲ್ಲಿರುವ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಆರೋಪಿಯನ್ನು ಮಂಗಳವಾರ ರಾತ್ರಿ ಹಾಜರು ಪಡಿಸಲಾಯಿತು.

ಡಿಆರ್‌ಐ ಅಧಿಕಾರಿಗಳು ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಕೋರದ ಕಾರಣ ನ್ಯಾಯಾಧೀಶರು ಮಾರ್ಚ್‌ 18ರ ವರೆಗೆ ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಚಿಕ್ಕಮಗಳೂರಿನ ರನ್ಯಾ 2014ರಲ್ಲಿ ‘ಮಾಣಿಕ್ಯ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದ್ದರು. ನಟ ಗಣೇಶ್ ಎದುರು ನಾಯಕಿಯಾಗಿ ‘ಪಟಾಕಿ’ ಸಿನಿಮಾ ಹಾಗೂ ತಮಿಳು ಸಿನಿಮಾವೊಂದರಲ್ಲಿ ಆಕೆ ನಟಿಸಿದ್ದಾರೆ. ಆದರೆ, ವೃತ್ತಿ ಬದುಕಿನಲ್ಲಿ ಅಷ್ಟೇನೂ ಯಶಸ್ಸು ಗಳಿಸಿರಲಿಲ್ಲ ಎಂದು ಹೇಳಲಾಗಿದೆ.

Ramesh Babu

Journalist

Recent Posts

ಬಳ್ಳಾರಿ ಬ್ಯಾನರ್ ಗಲಾಟೆ ವಿಚಾರ: ನಿನ್ನೆಯಷ್ಟೇ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ…

6 hours ago

ಹೆಲ್ಮೆಟ್ ಹಾಕದ ಬೈಕ್ ಸವಾರರಿಗೆ ದಂಡದ ಬಿಸಿ ಮುಟ್ಟಿಸಿದ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

6 hours ago

ಅಕ್ರಮ ವಲಸೆ ತಪ್ಪು…. ದಯವಿಟ್ಟು ಸಕ್ರಮ ಬದುಕು ನಮ್ಮದಾಗಲಿ…..

ಯಾವುದು ನ್ಯಾಯ...... ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ…

15 hours ago

ಹೊಸ ವರ್ಷ ದಿನದಂದೇ ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆ…? ನ್ಯೂ ಇಯರ್ ಸೆಲೆಬ್ರೇಷನ್ ನೆಪದಲ್ಲಿ ರೂಮಿನಲ್ಲಿ ಎಣ್ಣೆ ಪಾರ್ಟಿ ಅರೆಂಜ್: ನ್ಯೂ ಇಯರ್ ಪಾರ್ಟಿ ಮಾಡೋಣ ಬಾ ಎಂದು ಫ್ರೆಂಡ್ನ ಕರೆಸಿಕೊಂಡು ಜೀವ ತೆಗೆದ್ನಾ ಆಸಾಮಿ….?

ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…

1 day ago

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಪೂರ್ಣ- ನೇತ್ರ ತಜ್ಞ ಡಾ. ಅರುಣ್ ಹನುಮಂತರಾಯ

ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…

1 day ago

800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು

ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…

1 day ago