ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಬಂಧನ: ‘ಮಾಣಿಕ್ಯ’ ಚಿತ್ರದ ನಟಿಯಿಂದ 15 ಕೆ.ಜಿ ಚಿನ್ನ ವಶ

ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ.

ಸೋಮವಾರ ರಾತ್ರಿ ಎಮಿರೆಟ್ಸ್‌ ಏರ್‌ಲೈನ್ಸ್‌ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ತಪಾಸಣೆ ಮಾಡಿದಾಗ ಅವರ ಬಳಿ 14.80 ಕೆ.ಜಿ ಚಿನ್ನ ಪತ್ತೆಯಾಗಿದೆ.

ವಿಚಾರಣೆಯ ನಂತರ ನಟಿಯನ್ನು ಬಂಧಿಸಿದ ಡಿಆರ್‌ಐ ಅಧಿಕಾರಿಗಳು ಆಕೆಯನ್ನು ಬೆಂಗಳೂರಿನ ಎಚ್‌ಬಿಆರ್‌ ಲೇಔಟ್‌ನಲ್ಲಿರುವ ಡಿಆರ್‌ಐ ಕಚೇರಿಗೆ ಕರೆದೊಯ್ದರು.

ಸುದೀಪ್‌ ನಟಿಸಿರುವ ‘ಮಾಣಿಕ್ಯ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ರನ್ಯಾ ರಾವ್‌, ತಾನು ಡಿಐಜಿ ಡಾ.ಕೆ.ರಾಮಚಂದ್ರರಾವ್‌ ಅವರ ಮಲಮಗಳು ಎಂದು ಪ್ರಾಥಮಿಕ ತನಿಖೆ ವೇಳೆ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದುಬೈನ ಚಿನ್ನ ಕಳ್ಳಸಾಗಣೆ ಜಾಲದಲ್ಲಿ ಕನ್ನಡದ ನಟಿಯೊಬ್ಬರು ಸಕ್ರಿಯರಾಗಿರುವ ಬಗ್ಗೆ ಡಿಆರ್‌ಐ ಅಧಿಕಾರಿಗಳಿಗೆ ಕೆಲವು ದಿನಗಳ ಹಿಂದೆ ಮಾಹಿತಿ ದೊರೆತ್ತಿತ್ತು. ಪದೇ ಪದೇ ದುಬೈಗೆ ಹೋಗಿ ಬರುತ್ತಿದ್ದ ರನ್ಯಾ ಓಡಾಟದ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದರು.

15 ದಿನಗಳಲ್ಲಿ ರನ್ಯಾ ರಾವ್‌ ನಾಲ್ಕು ಬಾರಿ ದುಬೈಗೆ ಹೋಗಿ ಬಂದಿದ್ದರು. ಅಧಿಕಾರಿಗಳು ಸೋಮವಾರ ರಾತ್ರಿ ಆಕೆ ಬರುವುದನ್ನೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದರು. ನಟಿ ಬಂದಿಳಿಯುತ್ತಲೇ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅವರ ಶಂಕೆ ನಿಜವಾಯಿತು.

ವಿಮಾನ ನಿಲ್ದಾಣದಲ್ಲಿಯೇ ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ ನಟಿಯನ್ನು ಬಂಧಿಸಿ ಡಿಆರ್‌ಐ ಕಚೇರಿಗೆ ಕರೆದೊಯ್ದರು.

ಕೋರಮಂಗಲದಲ್ಲಿರುವ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಆರೋಪಿಯನ್ನು ಮಂಗಳವಾರ ರಾತ್ರಿ ಹಾಜರು ಪಡಿಸಲಾಯಿತು.

ಡಿಆರ್‌ಐ ಅಧಿಕಾರಿಗಳು ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಕೋರದ ಕಾರಣ ನ್ಯಾಯಾಧೀಶರು ಮಾರ್ಚ್‌ 18ರ ವರೆಗೆ ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಚಿಕ್ಕಮಗಳೂರಿನ ರನ್ಯಾ 2014ರಲ್ಲಿ ‘ಮಾಣಿಕ್ಯ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದ್ದರು. ನಟ ಗಣೇಶ್ ಎದುರು ನಾಯಕಿಯಾಗಿ ‘ಪಟಾಕಿ’ ಸಿನಿಮಾ ಹಾಗೂ ತಮಿಳು ಸಿನಿಮಾವೊಂದರಲ್ಲಿ ಆಕೆ ನಟಿಸಿದ್ದಾರೆ. ಆದರೆ, ವೃತ್ತಿ ಬದುಕಿನಲ್ಲಿ ಅಷ್ಟೇನೂ ಯಶಸ್ಸು ಗಳಿಸಿರಲಿಲ್ಲ ಎಂದು ಹೇಳಲಾಗಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

11 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

11 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

14 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

15 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

19 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

23 hours ago