ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಬಂಧನ: ‘ಮಾಣಿಕ್ಯ’ ಚಿತ್ರದ ನಟಿಯಿಂದ 15 ಕೆ.ಜಿ ಚಿನ್ನ ವಶ

ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ.

ಸೋಮವಾರ ರಾತ್ರಿ ಎಮಿರೆಟ್ಸ್‌ ಏರ್‌ಲೈನ್ಸ್‌ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ತಪಾಸಣೆ ಮಾಡಿದಾಗ ಅವರ ಬಳಿ 14.80 ಕೆ.ಜಿ ಚಿನ್ನ ಪತ್ತೆಯಾಗಿದೆ.

ವಿಚಾರಣೆಯ ನಂತರ ನಟಿಯನ್ನು ಬಂಧಿಸಿದ ಡಿಆರ್‌ಐ ಅಧಿಕಾರಿಗಳು ಆಕೆಯನ್ನು ಬೆಂಗಳೂರಿನ ಎಚ್‌ಬಿಆರ್‌ ಲೇಔಟ್‌ನಲ್ಲಿರುವ ಡಿಆರ್‌ಐ ಕಚೇರಿಗೆ ಕರೆದೊಯ್ದರು.

ಸುದೀಪ್‌ ನಟಿಸಿರುವ ‘ಮಾಣಿಕ್ಯ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ರನ್ಯಾ ರಾವ್‌, ತಾನು ಡಿಐಜಿ ಡಾ.ಕೆ.ರಾಮಚಂದ್ರರಾವ್‌ ಅವರ ಮಲಮಗಳು ಎಂದು ಪ್ರಾಥಮಿಕ ತನಿಖೆ ವೇಳೆ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದುಬೈನ ಚಿನ್ನ ಕಳ್ಳಸಾಗಣೆ ಜಾಲದಲ್ಲಿ ಕನ್ನಡದ ನಟಿಯೊಬ್ಬರು ಸಕ್ರಿಯರಾಗಿರುವ ಬಗ್ಗೆ ಡಿಆರ್‌ಐ ಅಧಿಕಾರಿಗಳಿಗೆ ಕೆಲವು ದಿನಗಳ ಹಿಂದೆ ಮಾಹಿತಿ ದೊರೆತ್ತಿತ್ತು. ಪದೇ ಪದೇ ದುಬೈಗೆ ಹೋಗಿ ಬರುತ್ತಿದ್ದ ರನ್ಯಾ ಓಡಾಟದ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದರು.

15 ದಿನಗಳಲ್ಲಿ ರನ್ಯಾ ರಾವ್‌ ನಾಲ್ಕು ಬಾರಿ ದುಬೈಗೆ ಹೋಗಿ ಬಂದಿದ್ದರು. ಅಧಿಕಾರಿಗಳು ಸೋಮವಾರ ರಾತ್ರಿ ಆಕೆ ಬರುವುದನ್ನೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದರು. ನಟಿ ಬಂದಿಳಿಯುತ್ತಲೇ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅವರ ಶಂಕೆ ನಿಜವಾಯಿತು.

ವಿಮಾನ ನಿಲ್ದಾಣದಲ್ಲಿಯೇ ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ ನಟಿಯನ್ನು ಬಂಧಿಸಿ ಡಿಆರ್‌ಐ ಕಚೇರಿಗೆ ಕರೆದೊಯ್ದರು.

ಕೋರಮಂಗಲದಲ್ಲಿರುವ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಆರೋಪಿಯನ್ನು ಮಂಗಳವಾರ ರಾತ್ರಿ ಹಾಜರು ಪಡಿಸಲಾಯಿತು.

ಡಿಆರ್‌ಐ ಅಧಿಕಾರಿಗಳು ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಕೋರದ ಕಾರಣ ನ್ಯಾಯಾಧೀಶರು ಮಾರ್ಚ್‌ 18ರ ವರೆಗೆ ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಚಿಕ್ಕಮಗಳೂರಿನ ರನ್ಯಾ 2014ರಲ್ಲಿ ‘ಮಾಣಿಕ್ಯ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದ್ದರು. ನಟ ಗಣೇಶ್ ಎದುರು ನಾಯಕಿಯಾಗಿ ‘ಪಟಾಕಿ’ ಸಿನಿಮಾ ಹಾಗೂ ತಮಿಳು ಸಿನಿಮಾವೊಂದರಲ್ಲಿ ಆಕೆ ನಟಿಸಿದ್ದಾರೆ. ಆದರೆ, ವೃತ್ತಿ ಬದುಕಿನಲ್ಲಿ ಅಷ್ಟೇನೂ ಯಶಸ್ಸು ಗಳಿಸಿರಲಿಲ್ಲ ಎಂದು ಹೇಳಲಾಗಿದೆ.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

49 minutes ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

2 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

7 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago