ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

ಕರ್ನಾಟಕ ಪೊಲೀಸರು ಇನ್ನು ಮುಂದೆ ಹೊಸ ರೂಪದ ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸುತ್ತಾರೆ. ಈ ಮೂಲಕ ಪೊಲೀಸರ ಸ್ಲೋಚ್ ಕ್ಯಾಪ್ ಇತಿಹಾಸದ ಪುಟ ಸೇರಿದೆ.

ಇಂದು ಮಾದನಾಯಕನಹಳ್ಳಿ BIEC ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಪೊಲೀಸ್ ಸಿಬ್ಬಂದಿಗೆ ಹೊಸ ಕ್ಯಾಪ್ ವಿತರಣೆ ಮಾಡಿದರು. ಬಳಿಕ ಪೊಲೀಸರು ಹೊಸ ಟೋಪಿ ಧರಿಸಿ ಮಿಂಚಿದರು.

1956ರಿಂದ ಟರ್ಬನ್ ಕ್ಯಾಪ್, ಸ್ಲೋಚ್ ಕ್ಯಾಪ್ ಚಾಲ್ತಿಯಲ್ಲಿತ್ತು. ಆದ್ರೆ, 2018ರಲ್ಲೇ ಕ್ಯಾಪ್ ಬದಲಾವಣೆಗೆ ಪ್ರಕ್ರಿಯೆ ಶುರುವಾದರೂ ಅದು ನನೆಗುದಿಗೆ ಬಿದ್ದಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರೇ ವೈಯಕ್ತಿಕ ಆಸಕ್ತಿ ವಹಿಸಿ, ಇಲಾಖೆಯ ಪ್ರಸ್ತಾವನೆಗೆ ಗ್ರೀನ್ ಸಿಗ್ನಲ್ ನೀಡಿದ್ದರು. ನೀಲಿ ಬಣ್ಣದ ಹೊಸ ಪೀಕ್ ಕ್ಯಾಪ್ ಅನ್ನು ಸಿಎಂ ಸಿದ್ದರಾಮಯ್ಯ ಅವರೇ ಸೆಲೆಕ್ಟ್ ಮಾಡಿದ್ದರು. ಈ ಮೂಲಕ ಪೊಲೀಸರ ಬಹುದಿನಗಳ ಬೇಡಿಕೆ ಈಡೇರಿದೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago