1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.
ಕರ್ನಾಟಕ ಪೊಲೀಸರು ಇನ್ನು ಮುಂದೆ ಹೊಸ ರೂಪದ ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸುತ್ತಾರೆ. ಈ ಮೂಲಕ ಪೊಲೀಸರ ಸ್ಲೋಚ್ ಕ್ಯಾಪ್ ಇತಿಹಾಸದ ಪುಟ ಸೇರಿದೆ.
ಇಂದು ಮಾದನಾಯಕನಹಳ್ಳಿ BIEC ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಪೊಲೀಸ್ ಸಿಬ್ಬಂದಿಗೆ ಹೊಸ ಕ್ಯಾಪ್ ವಿತರಣೆ ಮಾಡಿದರು. ಬಳಿಕ ಪೊಲೀಸರು ಹೊಸ ಟೋಪಿ ಧರಿಸಿ ಮಿಂಚಿದರು.
1956ರಿಂದ ಟರ್ಬನ್ ಕ್ಯಾಪ್, ಸ್ಲೋಚ್ ಕ್ಯಾಪ್ ಚಾಲ್ತಿಯಲ್ಲಿತ್ತು. ಆದ್ರೆ, 2018ರಲ್ಲೇ ಕ್ಯಾಪ್ ಬದಲಾವಣೆಗೆ ಪ್ರಕ್ರಿಯೆ ಶುರುವಾದರೂ ಅದು ನನೆಗುದಿಗೆ ಬಿದ್ದಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರೇ ವೈಯಕ್ತಿಕ ಆಸಕ್ತಿ ವಹಿಸಿ, ಇಲಾಖೆಯ ಪ್ರಸ್ತಾವನೆಗೆ ಗ್ರೀನ್ ಸಿಗ್ನಲ್ ನೀಡಿದ್ದರು. ನೀಲಿ ಬಣ್ಣದ ಹೊಸ ಪೀಕ್ ಕ್ಯಾಪ್ ಅನ್ನು ಸಿಎಂ ಸಿದ್ದರಾಮಯ್ಯ ಅವರೇ ಸೆಲೆಕ್ಟ್ ಮಾಡಿದ್ದರು. ಈ ಮೂಲಕ ಪೊಲೀಸರ ಬಹುದಿನಗಳ ಬೇಡಿಕೆ ಈಡೇರಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…