ಸ್ವಂತ ತಂಗಿ ಮಗನನ್ನ ಬಲಿ‌ ಪಡೆದ ಅಕ್ಕ: ಮತ್ತೊಂದು ಹೆಣ್ಣು ಮಗುವನ್ನ ಮಾರಾಟಕ್ಕೆ ಯತ್ನ: ಸದ್ಯ ಪೊಲೀಸರ ವಶದಲ್ಲಿ ಆರೋಪಿ

ಸ್ವಂತ ತಂಗಿ ಮೇಲಿನ ಸೇಡಿಗೆ ಆಕೆಯ 6 ವರ್ಷದ ಗಂಡು  ಮಗುವನ್ನು ನಿರ್ಜನ ಪ್ರದೇಶಕ್ಕೆ ಕರದೊಯ್ದು ತಲೆಗೆ ಬಲವಾಗಿ ಹೊಡೆದು ಕೊಂದು ಹಾಕಿ, ಅಲ್ಲೇ ಮಣ್ಣು ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಮುತ್ತಕದಹಳ್ಳಿ ಬಳಿ ನಡೆದಿದೆ.

6 ವರ್ಷದ ಮಧು ಎಂಬ ಗಂಡು ಮಗುವನ್ನ ಕೊಂದು ಹಾಕಿರುವ ಅಂಬಿಕಾ. ಮತ್ತೊಂದು ಹೆಣ್ಣು ಮಗುವಾದ ಮನುಶ್ರೀ ಕರೆದೊಯ್ದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಸಿದಾಗ ಪೊಲೀಸರಿಗೆ ಅಂಬಿಕಾ ಸಿಕ್ಕಿಬಿದ್ದಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿಯಲ್ಲಿ  ನಾಗರಾಜು ಹಾಗೂ ಅನಿತಾ ದಂಪತಿ ವಾಸ ಮಾಡುತ್ತಿದ್ದರು. ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾಳ ತವರು ಮನೆ ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿ ಆಗಿರುತ್ತದೆ.

ಗಂಡಂದಿರನ್ನ ಬಿಟ್ಟು ಬಂದು ತವರೂರಲ್ಲೇ ವಾಸವಾಗಿರುವ ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾ. ಅಂಬಿಕಾ ಹಾಗೂ ಅನಿತಾ ನಡುವೆ ಪದೇ ಪದೇ ಜಗಳ ವೈಮನಸ್ಸು ಆಗುತ್ತಿತ್ತು.

ಅಂಬಿಕಾಳ ವ್ಯಕ್ತಿತ್ವ ಸರಿ ಇಲ್ಲ ಎಂದು ಅನಿತಾ‌ ಪದೇ ಪದೇ ಬೈಯ್ಯುತ್ತಿದ್ದರು. ಇದೇ ಕೋಪಕ್ಕೆ ಅನಿತಾಳ ಮಕ್ಕಳನ್ನ ಕರೆದೊಯ್ದು ಕೃತ್ಯ ಎಸಗಿರುವ ಅಕ್ಕ ಅಂಬಿಕಾ.

ಗಂಡು ಮಗು ಮಧು ಕೊಲೆ ಮಾಡಿ, ಹೆಣ್ಣು ಮಗು ಮನುಶ್ರೀಯನ್ನ ಮಾರಾಟಕ್ಕೆ ಯತ್ನಸಿದ್ದಾರೆ ಎನ್ನಲಾಗಿದೆ‌. ಸದ್ಯ ಅಂಬಿಕಾ ಪೇರೇಸಂದ್ರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ರಿಂದ ಆರೋಪಿ ವಿಚಾರಣೆ ನಡೆಸಲಾಗುತ್ತಿದೆ.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

5 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

5 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

6 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

9 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

11 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

14 hours ago