ಸ್ವಂತ ತಂಗಿ ಮೇಲಿನ ಸೇಡಿಗೆ ಆಕೆಯ 6 ವರ್ಷದ ಗಂಡು ಮಗುವನ್ನು ನಿರ್ಜನ ಪ್ರದೇಶಕ್ಕೆ ಕರದೊಯ್ದು ತಲೆಗೆ ಬಲವಾಗಿ ಹೊಡೆದು ಕೊಂದು ಹಾಕಿ, ಅಲ್ಲೇ ಮಣ್ಣು ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಮುತ್ತಕದಹಳ್ಳಿ ಬಳಿ ನಡೆದಿದೆ.
6 ವರ್ಷದ ಮಧು ಎಂಬ ಗಂಡು ಮಗುವನ್ನ ಕೊಂದು ಹಾಕಿರುವ ಅಂಬಿಕಾ. ಮತ್ತೊಂದು ಹೆಣ್ಣು ಮಗುವಾದ ಮನುಶ್ರೀ ಕರೆದೊಯ್ದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಸಿದಾಗ ಪೊಲೀಸರಿಗೆ ಅಂಬಿಕಾ ಸಿಕ್ಕಿಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿಯಲ್ಲಿ ನಾಗರಾಜು ಹಾಗೂ ಅನಿತಾ ದಂಪತಿ ವಾಸ ಮಾಡುತ್ತಿದ್ದರು. ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾಳ ತವರು ಮನೆ ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿ ಆಗಿರುತ್ತದೆ.
ಗಂಡಂದಿರನ್ನ ಬಿಟ್ಟು ಬಂದು ತವರೂರಲ್ಲೇ ವಾಸವಾಗಿರುವ ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾ. ಅಂಬಿಕಾ ಹಾಗೂ ಅನಿತಾ ನಡುವೆ ಪದೇ ಪದೇ ಜಗಳ ವೈಮನಸ್ಸು ಆಗುತ್ತಿತ್ತು.
ಅಂಬಿಕಾಳ ವ್ಯಕ್ತಿತ್ವ ಸರಿ ಇಲ್ಲ ಎಂದು ಅನಿತಾ ಪದೇ ಪದೇ ಬೈಯ್ಯುತ್ತಿದ್ದರು. ಇದೇ ಕೋಪಕ್ಕೆ ಅನಿತಾಳ ಮಕ್ಕಳನ್ನ ಕರೆದೊಯ್ದು ಕೃತ್ಯ ಎಸಗಿರುವ ಅಕ್ಕ ಅಂಬಿಕಾ.
ಗಂಡು ಮಗು ಮಧು ಕೊಲೆ ಮಾಡಿ, ಹೆಣ್ಣು ಮಗು ಮನುಶ್ರೀಯನ್ನ ಮಾರಾಟಕ್ಕೆ ಯತ್ನಸಿದ್ದಾರೆ ಎನ್ನಲಾಗಿದೆ. ಸದ್ಯ ಅಂಬಿಕಾ ಪೇರೇಸಂದ್ರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ರಿಂದ ಆರೋಪಿ ವಿಚಾರಣೆ ನಡೆಸಲಾಗುತ್ತಿದೆ.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…