ಸ್ವಂತ ತಂಗಿ ಮೇಲಿನ ಸೇಡಿಗೆ ಆಕೆಯ 6 ವರ್ಷದ ಗಂಡು ಮಗುವನ್ನು ನಿರ್ಜನ ಪ್ರದೇಶಕ್ಕೆ ಕರದೊಯ್ದು ತಲೆಗೆ ಬಲವಾಗಿ ಹೊಡೆದು ಕೊಂದು ಹಾಕಿ, ಅಲ್ಲೇ ಮಣ್ಣು ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಮುತ್ತಕದಹಳ್ಳಿ ಬಳಿ ನಡೆದಿದೆ.
6 ವರ್ಷದ ಮಧು ಎಂಬ ಗಂಡು ಮಗುವನ್ನ ಕೊಂದು ಹಾಕಿರುವ ಅಂಬಿಕಾ. ಮತ್ತೊಂದು ಹೆಣ್ಣು ಮಗುವಾದ ಮನುಶ್ರೀ ಕರೆದೊಯ್ದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಸಿದಾಗ ಪೊಲೀಸರಿಗೆ ಅಂಬಿಕಾ ಸಿಕ್ಕಿಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿಯಲ್ಲಿ ನಾಗರಾಜು ಹಾಗೂ ಅನಿತಾ ದಂಪತಿ ವಾಸ ಮಾಡುತ್ತಿದ್ದರು. ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾಳ ತವರು ಮನೆ ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿ ಆಗಿರುತ್ತದೆ.
ಗಂಡಂದಿರನ್ನ ಬಿಟ್ಟು ಬಂದು ತವರೂರಲ್ಲೇ ವಾಸವಾಗಿರುವ ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾ. ಅಂಬಿಕಾ ಹಾಗೂ ಅನಿತಾ ನಡುವೆ ಪದೇ ಪದೇ ಜಗಳ ವೈಮನಸ್ಸು ಆಗುತ್ತಿತ್ತು.
ಅಂಬಿಕಾಳ ವ್ಯಕ್ತಿತ್ವ ಸರಿ ಇಲ್ಲ ಎಂದು ಅನಿತಾ ಪದೇ ಪದೇ ಬೈಯ್ಯುತ್ತಿದ್ದರು. ಇದೇ ಕೋಪಕ್ಕೆ ಅನಿತಾಳ ಮಕ್ಕಳನ್ನ ಕರೆದೊಯ್ದು ಕೃತ್ಯ ಎಸಗಿರುವ ಅಕ್ಕ ಅಂಬಿಕಾ.
ಗಂಡು ಮಗು ಮಧು ಕೊಲೆ ಮಾಡಿ, ಹೆಣ್ಣು ಮಗು ಮನುಶ್ರೀಯನ್ನ ಮಾರಾಟಕ್ಕೆ ಯತ್ನಸಿದ್ದಾರೆ ಎನ್ನಲಾಗಿದೆ. ಸದ್ಯ ಅಂಬಿಕಾ ಪೇರೇಸಂದ್ರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ರಿಂದ ಆರೋಪಿ ವಿಚಾರಣೆ ನಡೆಸಲಾಗುತ್ತಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…