ಸ್ವಂತ ತಂಗಿ ಮೇಲಿನ ಸೇಡಿಗೆ ಆಕೆಯ 6 ವರ್ಷದ ಗಂಡು ಮಗುವನ್ನು ನಿರ್ಜನ ಪ್ರದೇಶಕ್ಕೆ ಕರದೊಯ್ದು ತಲೆಗೆ ಬಲವಾಗಿ ಹೊಡೆದು ಕೊಂದು ಹಾಕಿ, ಅಲ್ಲೇ ಮಣ್ಣು ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಮುತ್ತಕದಹಳ್ಳಿ ಬಳಿ ನಡೆದಿದೆ.
6 ವರ್ಷದ ಮಧು ಎಂಬ ಗಂಡು ಮಗುವನ್ನ ಕೊಂದು ಹಾಕಿರುವ ಅಂಬಿಕಾ. ಮತ್ತೊಂದು ಹೆಣ್ಣು ಮಗುವಾದ ಮನುಶ್ರೀ ಕರೆದೊಯ್ದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಸಿದಾಗ ಪೊಲೀಸರಿಗೆ ಅಂಬಿಕಾ ಸಿಕ್ಕಿಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿಯಲ್ಲಿ ನಾಗರಾಜು ಹಾಗೂ ಅನಿತಾ ದಂಪತಿ ವಾಸ ಮಾಡುತ್ತಿದ್ದರು. ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾಳ ತವರು ಮನೆ ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿ ಆಗಿರುತ್ತದೆ.
ಗಂಡಂದಿರನ್ನ ಬಿಟ್ಟು ಬಂದು ತವರೂರಲ್ಲೇ ವಾಸವಾಗಿರುವ ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾ. ಅಂಬಿಕಾ ಹಾಗೂ ಅನಿತಾ ನಡುವೆ ಪದೇ ಪದೇ ಜಗಳ ವೈಮನಸ್ಸು ಆಗುತ್ತಿತ್ತು.
ಅಂಬಿಕಾಳ ವ್ಯಕ್ತಿತ್ವ ಸರಿ ಇಲ್ಲ ಎಂದು ಅನಿತಾ ಪದೇ ಪದೇ ಬೈಯ್ಯುತ್ತಿದ್ದರು. ಇದೇ ಕೋಪಕ್ಕೆ ಅನಿತಾಳ ಮಕ್ಕಳನ್ನ ಕರೆದೊಯ್ದು ಕೃತ್ಯ ಎಸಗಿರುವ ಅಕ್ಕ ಅಂಬಿಕಾ.
ಗಂಡು ಮಗು ಮಧು ಕೊಲೆ ಮಾಡಿ, ಹೆಣ್ಣು ಮಗು ಮನುಶ್ರೀಯನ್ನ ಮಾರಾಟಕ್ಕೆ ಯತ್ನಸಿದ್ದಾರೆ ಎನ್ನಲಾಗಿದೆ. ಸದ್ಯ ಅಂಬಿಕಾ ಪೇರೇಸಂದ್ರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ರಿಂದ ಆರೋಪಿ ವಿಚಾರಣೆ ನಡೆಸಲಾಗುತ್ತಿದೆ.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…