ಸ್ವಂತ ತಂಗಿ ಮೇಲಿನ ಸೇಡಿಗೆ ಆಕೆಯ 6 ವರ್ಷದ ಗಂಡು ಮಗುವನ್ನು ನಿರ್ಜನ ಪ್ರದೇಶಕ್ಕೆ ಕರದೊಯ್ದು ತಲೆಗೆ ಬಲವಾಗಿ ಹೊಡೆದು ಕೊಂದು ಹಾಕಿ, ಅಲ್ಲೇ ಮಣ್ಣು ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಮುತ್ತಕದಹಳ್ಳಿ ಬಳಿ ನಡೆದಿದೆ.
6 ವರ್ಷದ ಮಧು ಎಂಬ ಗಂಡು ಮಗುವನ್ನ ಕೊಂದು ಹಾಕಿರುವ ಅಂಬಿಕಾ. ಮತ್ತೊಂದು ಹೆಣ್ಣು ಮಗುವಾದ ಮನುಶ್ರೀ ಕರೆದೊಯ್ದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಸಿದಾಗ ಪೊಲೀಸರಿಗೆ ಅಂಬಿಕಾ ಸಿಕ್ಕಿಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿಯಲ್ಲಿ ನಾಗರಾಜು ಹಾಗೂ ಅನಿತಾ ದಂಪತಿ ವಾಸ ಮಾಡುತ್ತಿದ್ದರು. ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾಳ ತವರು ಮನೆ ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿ ಆಗಿರುತ್ತದೆ.
ಗಂಡಂದಿರನ್ನ ಬಿಟ್ಟು ಬಂದು ತವರೂರಲ್ಲೇ ವಾಸವಾಗಿರುವ ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾ. ಅಂಬಿಕಾ ಹಾಗೂ ಅನಿತಾ ನಡುವೆ ಪದೇ ಪದೇ ಜಗಳ ವೈಮನಸ್ಸು ಆಗುತ್ತಿತ್ತು.
ಅಂಬಿಕಾಳ ವ್ಯಕ್ತಿತ್ವ ಸರಿ ಇಲ್ಲ ಎಂದು ಅನಿತಾ ಪದೇ ಪದೇ ಬೈಯ್ಯುತ್ತಿದ್ದರು. ಇದೇ ಕೋಪಕ್ಕೆ ಅನಿತಾಳ ಮಕ್ಕಳನ್ನ ಕರೆದೊಯ್ದು ಕೃತ್ಯ ಎಸಗಿರುವ ಅಕ್ಕ ಅಂಬಿಕಾ.
ಗಂಡು ಮಗು ಮಧು ಕೊಲೆ ಮಾಡಿ, ಹೆಣ್ಣು ಮಗು ಮನುಶ್ರೀಯನ್ನ ಮಾರಾಟಕ್ಕೆ ಯತ್ನಸಿದ್ದಾರೆ ಎನ್ನಲಾಗಿದೆ. ಸದ್ಯ ಅಂಬಿಕಾ ಪೇರೇಸಂದ್ರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ರಿಂದ ಆರೋಪಿ ವಿಚಾರಣೆ ನಡೆಸಲಾಗುತ್ತಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…