ಸ್ವಂತ ತಂಗಿ ಮೇಲಿನ ಸೇಡಿಗೆ ಆಕೆಯ 6 ವರ್ಷದ ಗಂಡು ಮಗುವನ್ನು ನಿರ್ಜನ ಪ್ರದೇಶಕ್ಕೆ ಕರದೊಯ್ದು ತಲೆಗೆ ಬಲವಾಗಿ ಹೊಡೆದು ಕೊಂದು ಹಾಕಿ, ಅಲ್ಲೇ ಮಣ್ಣು ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಮುತ್ತಕದಹಳ್ಳಿ ಬಳಿ ನಡೆದಿದೆ.
6 ವರ್ಷದ ಮಧು ಎಂಬ ಗಂಡು ಮಗುವನ್ನ ಕೊಂದು ಹಾಕಿರುವ ಅಂಬಿಕಾ. ಮತ್ತೊಂದು ಹೆಣ್ಣು ಮಗುವಾದ ಮನುಶ್ರೀ ಕರೆದೊಯ್ದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಸಿದಾಗ ಪೊಲೀಸರಿಗೆ ಅಂಬಿಕಾ ಸಿಕ್ಕಿಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿಯಲ್ಲಿ ನಾಗರಾಜು ಹಾಗೂ ಅನಿತಾ ದಂಪತಿ ವಾಸ ಮಾಡುತ್ತಿದ್ದರು. ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾಳ ತವರು ಮನೆ ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿ ಆಗಿರುತ್ತದೆ.
ಗಂಡಂದಿರನ್ನ ಬಿಟ್ಟು ಬಂದು ತವರೂರಲ್ಲೇ ವಾಸವಾಗಿರುವ ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾ. ಅಂಬಿಕಾ ಹಾಗೂ ಅನಿತಾ ನಡುವೆ ಪದೇ ಪದೇ ಜಗಳ ವೈಮನಸ್ಸು ಆಗುತ್ತಿತ್ತು.
ಅಂಬಿಕಾಳ ವ್ಯಕ್ತಿತ್ವ ಸರಿ ಇಲ್ಲ ಎಂದು ಅನಿತಾ ಪದೇ ಪದೇ ಬೈಯ್ಯುತ್ತಿದ್ದರು. ಇದೇ ಕೋಪಕ್ಕೆ ಅನಿತಾಳ ಮಕ್ಕಳನ್ನ ಕರೆದೊಯ್ದು ಕೃತ್ಯ ಎಸಗಿರುವ ಅಕ್ಕ ಅಂಬಿಕಾ.
ಗಂಡು ಮಗು ಮಧು ಕೊಲೆ ಮಾಡಿ, ಹೆಣ್ಣು ಮಗು ಮನುಶ್ರೀಯನ್ನ ಮಾರಾಟಕ್ಕೆ ಯತ್ನಸಿದ್ದಾರೆ ಎನ್ನಲಾಗಿದೆ. ಸದ್ಯ ಅಂಬಿಕಾ ಪೇರೇಸಂದ್ರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ರಿಂದ ಆರೋಪಿ ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…