ಸ್ವಂತ ತಂಗಿ ಮೇಲಿನ ಸೇಡಿಗೆ ಆಕೆಯ 6 ವರ್ಷದ ಗಂಡು ಮಗುವನ್ನು ನಿರ್ಜನ ಪ್ರದೇಶಕ್ಕೆ ಕರದೊಯ್ದು ತಲೆಗೆ ಬಲವಾಗಿ ಹೊಡೆದು ಕೊಂದು ಹಾಕಿ, ಅಲ್ಲೇ ಮಣ್ಣು ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಮುತ್ತಕದಹಳ್ಳಿ ಬಳಿ ನಡೆದಿದೆ.
6 ವರ್ಷದ ಮಧು ಎಂಬ ಗಂಡು ಮಗುವನ್ನ ಕೊಂದು ಹಾಕಿರುವ ಅಂಬಿಕಾ. ಮತ್ತೊಂದು ಹೆಣ್ಣು ಮಗುವಾದ ಮನುಶ್ರೀ ಕರೆದೊಯ್ದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಸಿದಾಗ ಪೊಲೀಸರಿಗೆ ಅಂಬಿಕಾ ಸಿಕ್ಕಿಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿಯಲ್ಲಿ ನಾಗರಾಜು ಹಾಗೂ ಅನಿತಾ ದಂಪತಿ ವಾಸ ಮಾಡುತ್ತಿದ್ದರು. ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾಳ ತವರು ಮನೆ ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿ ಆಗಿರುತ್ತದೆ.
ಗಂಡಂದಿರನ್ನ ಬಿಟ್ಟು ಬಂದು ತವರೂರಲ್ಲೇ ವಾಸವಾಗಿರುವ ಅಕ್ಕ ಅಂಬಿಕಾ ಹಾಗೂ ತಂಗಿ ಅನಿತಾ. ಅಂಬಿಕಾ ಹಾಗೂ ಅನಿತಾ ನಡುವೆ ಪದೇ ಪದೇ ಜಗಳ ವೈಮನಸ್ಸು ಆಗುತ್ತಿತ್ತು.
ಅಂಬಿಕಾಳ ವ್ಯಕ್ತಿತ್ವ ಸರಿ ಇಲ್ಲ ಎಂದು ಅನಿತಾ ಪದೇ ಪದೇ ಬೈಯ್ಯುತ್ತಿದ್ದರು. ಇದೇ ಕೋಪಕ್ಕೆ ಅನಿತಾಳ ಮಕ್ಕಳನ್ನ ಕರೆದೊಯ್ದು ಕೃತ್ಯ ಎಸಗಿರುವ ಅಕ್ಕ ಅಂಬಿಕಾ.
ಗಂಡು ಮಗು ಮಧು ಕೊಲೆ ಮಾಡಿ, ಹೆಣ್ಣು ಮಗು ಮನುಶ್ರೀಯನ್ನ ಮಾರಾಟಕ್ಕೆ ಯತ್ನಸಿದ್ದಾರೆ ಎನ್ನಲಾಗಿದೆ. ಸದ್ಯ ಅಂಬಿಕಾ ಪೇರೇಸಂದ್ರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ರಿಂದ ಆರೋಪಿ ವಿಚಾರಣೆ ನಡೆಸಲಾಗುತ್ತಿದೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…