ಕೋಲಾರ : ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಹೊಣೆ ಹಾಗೂ ಜವಾಬ್ದಾರಿಯಾಗಬೇಕು ಎಂದು ಬೆಳ್ಳೂರು ಗ್ರಾಪಂ ಪಿಡಿಒ ಸಂಪರಾಜ್ ತಿಳಿಸಿದರು,
ತಾಲೂಕಿನ ನರಸಾಪುರ ಹೋಬಳಿಯ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೋಡಿ ಕೃಷ್ಣಾಪುರ ಗ್ರಾಮದಲ್ಲಿ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಮತ್ತು ಬೆಳ್ಳೂರು ಗ್ರಾಮ ಪಂಚಾಯಿತಿ ಹಮ್ಮಿಕೊಳ್ಳಲಾಗಿರುವ ಸ್ವಚ್ಛೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕಾರ್ಮಿಕರು, ನಾಗರೀಕರು, ನಾವುಗಳೆಲ್ಲರು ಸೇರಿ ಸ್ವಚ್ಛತೆಯ ರೂವಾರಿಗಳಾಗಿ ತಮ್ಮ ಕುಟುಂಬ ಮತ್ತು ಸುತ್ತ ಮುತ್ತಲಿನ ಜನರಲ್ಲಿ ಪರಿಸರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ ನಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.
ನಾವು ಬಳಸುವ ಪ್ಲಾಸ್ಟಿಕ್ನಿಂದ ಯಾವ ರೀತಿ ಹಾನಿಯಾಗುತ್ತಿದೆ ಎಂದು ಜನಸಾಮಾನ್ಯರಿಗೆ ಅರಿವು ಇಲ್ಲವಾಗಿದೆ ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು ಬಯಲು ಶೌಚಾಲಯ ನಿರ್ಮೂಲನೆಯನ್ನು, ಘನ ತ್ಯಾಜ್ಯಗಳ ನಿರ್ವಹಣೆ, ಮರುಬಳಕೆ, ಮತ್ತು ಸಂಸ್ಕರಣೆಯನ್ನು ಮಾಡುವ ಕೆಲಸವನ್ನು ಮಾಡಿದ್ದೇವೆ ಇಂದಿನ ಯುವ ಜನಾಂಗದವರು ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗಿಸಲು ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಹಕಾರಿಯಾಗುತ್ತದೆ. ಇಂದು ದೇಶ ಎದುರಿಸುವ ದೊಡ್ಡ ಸಮಸ್ಯೆ ಘನತ್ಯಾಜ್ಯ ನಿರ್ವಹಣೆ. ಆದರಿಂದ ನಮ್ಮ ದೇಶವನ್ನು ಸ್ವಚ್ಛವಾಗಿಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಗ್ರಾಪಂ ಅಧ್ಯಕ್ಷೆ ಮಮತಾ ಮಂಜುನಾಥ್ ಮಾತನಾಡಿ ಒಬ್ಬ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಲು ಸ್ವಚ್ಛತೆ ಅತ್ಯಗತ್ಯ ಮೊದಲು ನಾವು, ನಂತರ ನಮ್ಮ ಕುಟುಂಬ ಸ್ವಚ್ಛವಾಗಿದ್ದರೆ ಇಡೀ ರಾಷ್ಟ್ರವನ್ನು ಸ್ವಚ್ಛವಾಗಿಡಬಹುದು. ಆ ಮೂಲಕ ನಮ್ಮ ಸರ್ಕಾರದ ಗುರಿ ಸ್ವಚ್ಛ ಭಾರತದ ಉದ್ದೇಶವನ್ನು ಸಾಧಿಸೋಣ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಟಾಟಾ ಎಲೆಕ್ಟ್ರಾನ್ಸ್ ಕಂಪನಿಯ ಸಿಬ್ಬಂದಿಗಳಾದ ನಿಹಾರಿಕಾ, ದಿವಾಕರ್, ಪರೀಕ್ಷತ್, ಬೆಳ್ಳೂರು ಗ್ರಾಪಂ ಸದಸ್ಯ ಸರೋಜಮ್ಮ ಬೈರಪ್ಪ ಪಂಚಾಯಿತಿ ಕಾರ್ಯದರ್ಶಿ ಚಂದ್ರಮೋಹನ್, ಎಸ್ ಡಿ ಎ ದೀಪಕ್ ಕುಮಾರ್, ಬಿಲ್ ಕಲೆಕ್ಟರ್ ಜ್ಯೋತಿ ಕುಮಾರ್ ಹಾಗೂ ಕಂಪನಿಯ ಸಿಬ್ಬಂದಿಗಳು ಹಾಜರಿದ್ದರು.
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…
ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…
ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…