ಕೋಲಾರ : ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಹೊಣೆ ಹಾಗೂ ಜವಾಬ್ದಾರಿಯಾಗಬೇಕು ಎಂದು ಬೆಳ್ಳೂರು ಗ್ರಾಪಂ ಪಿಡಿಒ ಸಂಪರಾಜ್ ತಿಳಿಸಿದರು,
ತಾಲೂಕಿನ ನರಸಾಪುರ ಹೋಬಳಿಯ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೋಡಿ ಕೃಷ್ಣಾಪುರ ಗ್ರಾಮದಲ್ಲಿ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಮತ್ತು ಬೆಳ್ಳೂರು ಗ್ರಾಮ ಪಂಚಾಯಿತಿ ಹಮ್ಮಿಕೊಳ್ಳಲಾಗಿರುವ ಸ್ವಚ್ಛೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕಾರ್ಮಿಕರು, ನಾಗರೀಕರು, ನಾವುಗಳೆಲ್ಲರು ಸೇರಿ ಸ್ವಚ್ಛತೆಯ ರೂವಾರಿಗಳಾಗಿ ತಮ್ಮ ಕುಟುಂಬ ಮತ್ತು ಸುತ್ತ ಮುತ್ತಲಿನ ಜನರಲ್ಲಿ ಪರಿಸರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ ನಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.
ನಾವು ಬಳಸುವ ಪ್ಲಾಸ್ಟಿಕ್ನಿಂದ ಯಾವ ರೀತಿ ಹಾನಿಯಾಗುತ್ತಿದೆ ಎಂದು ಜನಸಾಮಾನ್ಯರಿಗೆ ಅರಿವು ಇಲ್ಲವಾಗಿದೆ ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು ಬಯಲು ಶೌಚಾಲಯ ನಿರ್ಮೂಲನೆಯನ್ನು, ಘನ ತ್ಯಾಜ್ಯಗಳ ನಿರ್ವಹಣೆ, ಮರುಬಳಕೆ, ಮತ್ತು ಸಂಸ್ಕರಣೆಯನ್ನು ಮಾಡುವ ಕೆಲಸವನ್ನು ಮಾಡಿದ್ದೇವೆ ಇಂದಿನ ಯುವ ಜನಾಂಗದವರು ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗಿಸಲು ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಹಕಾರಿಯಾಗುತ್ತದೆ. ಇಂದು ದೇಶ ಎದುರಿಸುವ ದೊಡ್ಡ ಸಮಸ್ಯೆ ಘನತ್ಯಾಜ್ಯ ನಿರ್ವಹಣೆ. ಆದರಿಂದ ನಮ್ಮ ದೇಶವನ್ನು ಸ್ವಚ್ಛವಾಗಿಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಗ್ರಾಪಂ ಅಧ್ಯಕ್ಷೆ ಮಮತಾ ಮಂಜುನಾಥ್ ಮಾತನಾಡಿ ಒಬ್ಬ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಲು ಸ್ವಚ್ಛತೆ ಅತ್ಯಗತ್ಯ ಮೊದಲು ನಾವು, ನಂತರ ನಮ್ಮ ಕುಟುಂಬ ಸ್ವಚ್ಛವಾಗಿದ್ದರೆ ಇಡೀ ರಾಷ್ಟ್ರವನ್ನು ಸ್ವಚ್ಛವಾಗಿಡಬಹುದು. ಆ ಮೂಲಕ ನಮ್ಮ ಸರ್ಕಾರದ ಗುರಿ ಸ್ವಚ್ಛ ಭಾರತದ ಉದ್ದೇಶವನ್ನು ಸಾಧಿಸೋಣ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಟಾಟಾ ಎಲೆಕ್ಟ್ರಾನ್ಸ್ ಕಂಪನಿಯ ಸಿಬ್ಬಂದಿಗಳಾದ ನಿಹಾರಿಕಾ, ದಿವಾಕರ್, ಪರೀಕ್ಷತ್, ಬೆಳ್ಳೂರು ಗ್ರಾಪಂ ಸದಸ್ಯ ಸರೋಜಮ್ಮ ಬೈರಪ್ಪ ಪಂಚಾಯಿತಿ ಕಾರ್ಯದರ್ಶಿ ಚಂದ್ರಮೋಹನ್, ಎಸ್ ಡಿ ಎ ದೀಪಕ್ ಕುಮಾರ್, ಬಿಲ್ ಕಲೆಕ್ಟರ್ ಜ್ಯೋತಿ ಕುಮಾರ್ ಹಾಗೂ ಕಂಪನಿಯ ಸಿಬ್ಬಂದಿಗಳು ಹಾಜರಿದ್ದರು.
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…