Categories: ಕೋಲಾರ

ಸ್ವಚ್ಚತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ- ಪಿಡಿಒ ಸಂಪರಾಜ್

ಕೋಲಾರ : ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಹೊಣೆ ಹಾಗೂ ಜವಾಬ್ದಾರಿಯಾಗಬೇಕು ಎಂದು ಬೆಳ್ಳೂರು ಗ್ರಾಪಂ ಪಿಡಿಒ ಸಂಪರಾಜ್ ತಿಳಿಸಿದರು,

ತಾಲೂಕಿನ ನರಸಾಪುರ ಹೋಬಳಿಯ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೋಡಿ ಕೃಷ್ಣಾಪುರ ಗ್ರಾಮದಲ್ಲಿ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಮತ್ತು ಬೆಳ್ಳೂರು ಗ್ರಾಮ ಪಂಚಾಯಿತಿ ಹಮ್ಮಿಕೊಳ್ಳಲಾಗಿರುವ ಸ್ವಚ್ಛೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕಾರ್ಮಿಕರು, ನಾಗರೀಕರು, ನಾವುಗಳೆಲ್ಲರು ಸೇರಿ ಸ್ವಚ್ಛತೆಯ ರೂವಾರಿಗಳಾಗಿ ತಮ್ಮ ಕುಟುಂಬ ಮತ್ತು ಸುತ್ತ ಮುತ್ತಲಿನ ಜನರಲ್ಲಿ ಪರಿಸರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ ನಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.

ನಾವು ಬಳಸುವ ಪ್ಲಾಸ್ಟಿಕ್‌ನಿಂದ ಯಾವ ರೀತಿ ಹಾನಿಯಾಗುತ್ತಿದೆ ಎಂದು ಜನಸಾಮಾನ್ಯರಿಗೆ ಅರಿವು ಇಲ್ಲವಾಗಿದೆ ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು ಬಯಲು ಶೌಚಾಲಯ ನಿರ್ಮೂಲನೆಯನ್ನು, ಘನ ತ್ಯಾಜ್ಯಗಳ ನಿರ್ವಹಣೆ, ಮರುಬಳಕೆ, ಮತ್ತು ಸಂಸ್ಕರಣೆಯನ್ನು ಮಾಡುವ ಕೆಲಸವನ್ನು ಮಾಡಿದ್ದೇವೆ ಇಂದಿನ ಯುವ ಜನಾಂಗದವರು ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗಿಸಲು ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಹಕಾರಿಯಾಗುತ್ತದೆ. ಇಂದು ದೇಶ ಎದುರಿಸುವ ದೊಡ್ಡ ಸಮಸ್ಯೆ ಘನತ್ಯಾಜ್ಯ ನಿರ್ವಹಣೆ. ಆದರಿಂದ ನಮ್ಮ ದೇಶವನ್ನು ಸ್ವಚ್ಛವಾಗಿಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಮಮತಾ ಮಂಜುನಾಥ್ ಮಾತನಾಡಿ ಒಬ್ಬ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಲು ಸ್ವಚ್ಛತೆ ಅತ್ಯಗತ್ಯ ಮೊದಲು ನಾವು, ನಂತರ ನಮ್ಮ ಕುಟುಂಬ ಸ್ವಚ್ಛವಾಗಿದ್ದರೆ ಇಡೀ ರಾಷ್ಟ್ರವನ್ನು ಸ್ವಚ್ಛವಾಗಿಡಬಹುದು. ಆ ಮೂಲಕ ನಮ್ಮ ಸರ್ಕಾರದ ಗುರಿ ಸ್ವಚ್ಛ ಭಾರತದ ಉದ್ದೇಶವನ್ನು ಸಾಧಿಸೋಣ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಟಾಟಾ ಎಲೆಕ್ಟ್ರಾನ್ಸ್ ಕಂಪನಿಯ ಸಿಬ್ಬಂದಿಗಳಾದ ನಿಹಾರಿಕಾ, ದಿವಾಕರ್, ಪರೀಕ್ಷತ್, ಬೆಳ್ಳೂರು ಗ್ರಾಪಂ ಸದಸ್ಯ ಸರೋಜಮ್ಮ ಬೈರಪ್ಪ ಪಂಚಾಯಿತಿ ಕಾರ್ಯದರ್ಶಿ ಚಂದ್ರಮೋಹನ್, ಎಸ್ ಡಿ ಎ ದೀಪಕ್ ಕುಮಾರ್, ಬಿಲ್ ಕಲೆಕ್ಟರ್ ಜ್ಯೋತಿ ಕುಮಾರ್ ಹಾಗೂ ಕಂಪನಿಯ ಸಿಬ್ಬಂದಿಗಳು ಹಾಜರಿದ್ದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

4 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

18 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

19 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

20 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

20 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

1 day ago