ಸ್ವಚ್ಛತೆ ಇದ್ದಲ್ಲಿ‌ ಆರೋಗ್ಯ ಇರುತ್ತದೆ-ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್

ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ ಮುತ್ತ ಕೊಳಚೆ ನೀರು ನಿಂತುಕೊಳ್ಳದಂತೆ ಜಾಗೃತಿವಹಿಸುವುದು, ಸೊಳ್ಳೆ ಉತ್ಪತ್ತಿಯಾಗದಂತೆ ನಿಗಾವಹಿಸುವುದು ಹಾಗೂ ಸೊಳ್ಳೆ ಕಡಿತಕ್ಕೆ ಒಳಗಾಗದಂತೆ ರಕ್ಷಣೆ ಮಾಡಿಕೊಳ್ಳುವುದರಿಂದ ಮಲೇರಿಯಾ ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನ ದ ಅಂಗವಾಗಿ “ಹೆಚ್ಚು ಸಮಾನತೆಯ ಜಗತ್ತಿಗೆ, ಮಲೇರಿಯಾ ವಿರುದ್ಧದ ಹೋರಾಟವನ್ನು ತೀವ್ರಗೊಳಿಸೋಣ” ಎಂಬ ಘೋಷವಾಕ್ಯದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಸಾಂಕ್ರಾಮಿಕ ಕಾಯಿಲೆಗಳಲ್ಲಿ ಮಲೇರಿಯಾ ಒಂದು. ಸಾಂಕ್ರಾಮಿಕ ಕಾಯಿಲೆಗಳು ಸೊಳ್ಳೆಗಳಿಂದ ಹರಡುತ್ತವೆ. ಅನಾಫಿಲಸ್ ಜಾತಿಗೆ ಸೇರಿದ ಹೆಣ್ಣು ಸೊಳ್ಳೆಗಳಿಂದ ಮಲೇರಿಯಾ ಸಾಂಕ್ರಾಮಿಕ ಕಾಯಿಲೆ ಬರುತ್ತದೆ. ಮಲೇರಿಯಾ ಕಾಯಿಲೆಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ವಿಶ್ವ ಮಲೇರಿಯಾ ದಿನಾಚರಣೆಯನ್ನು ಆಚರಿಸುವ ಮೂಲಕ ಜನರಿಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದೆ ಎಂದರು.

ಹರಿಯದೆ ನಿಂತುಕೊಳ್ಳುವ ಕೊಳಚೆ ನೀರು, ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಇಲ್ಲದ ಸ್ಥಳಗಳಲ್ಲಿ ಮಲೇರಿಯಾ ಹರಡುವ ಸೊಳ್ಳೆಗಳು ಉತ್ಪಪತ್ತಿಯಾಗುತ್ತವೆ. ಸೊಳ್ಳೆ ಒಬ್ಬನಿಂದ ಮತ್ತೊಬ್ಬನಿಗೆ ಕಡಿಯುವ ಮೂಲಕ ಮಲೇರಿಯಾ ಸಾಂಕ್ರಾಮಿಕ ಕಾಯಿಲೆ ಬರುತ್ತದೆ. ಇಂತಹ ಸಂದರ್ಭದಲ್ಲಿ ವ್ಯಕ್ತಿಗೆ ಚಳಿ-ಜ್ವರ ಬರುವ ಲಕ್ಷಣ ಕಾಣಿಸಿಕೊಳ್ಳುತ್ತದೆ. ಕೂಡಲೇ ಹತ್ತಿರದಲ್ಲಿರುವ ಆಸ್ಪತ್ರೆಗೆ ಹೋಗಿ ವೈದ್ಯರಿಂದ ರಕ್ಷ ಪರೀಕ್ಷೆ ಮಾಡಿಸಿಕೊಳ್ಳುವುದರ ಜತೆಯಲ್ಲಿ ಅವರ ಸೂಚನೆಯಂತೆ ಚಿಕಿತ್ಸೆಗೆ ಒಳಗಾಗಬೇಕು ಎಂದು ಸಲಹೆ ನೀಡಿದರು.

ವಿಶ್ವ ಮಲೇರಿಯಾ ದಿನದ ಅರಿವು ಮೂಡಿಸುವ ಸಲುವಾಗಿ ಸರಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಿಂದ ನಗರದ ಟಿ.ಬಿ ವೃತ್ತದ ವರೆಗೆ ಜಾಥಾವನ್ನು ಮಾಡಲಾಯಿತು. ಮಾನವ ನಿರ್ಮಿತ ಸರಪಳಿ ರಚಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ  ತಾಲೂಕು ಆರೋಗ್ಯ ಅಧಿಕಾರಿ ಡಾ.ಶಾರದ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಶಿವಕುಮಾರ್, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ಕೀಟ ಶಾಸ್ತ್ರ ತಜ್ಞರಾದ ಲತಾ, ಆರೋಗ್ಯ ಮೇಲ್ವಿಚಾರಕರಾದ ನಟರಾಜ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

49 seconds ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

3 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

4 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

15 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

15 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

18 hours ago