ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಪಂಚಾಯಿತಿ ವ್ಯಾಪ್ತಿಯ ಭೋವಿಪಾಳ್ಯ ಗ್ರಾಮದಲ್ಲಿ ಸ್ವಚ್ಛತೆ ಇಲ್ಲದ ಚರಂಡಿಗಳು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿವೆ. ಸೊಳ್ಳೆಗಳ ಕಾಟದಿಂದಾಗಿ ಮಲೇರಿಯಾ ಮತ್ತಿತರ ರೋಗ ಹರಡುವ ಭೀತಿಯಲ್ಲಿ ಗ್ರಾಮಸ್ಥರಿದ್ದಾರೆ.
ಆಗಾಗ ಮಳೆಯಾಗುತ್ತಿರುವುದರಿಂದ ಚರಂಡಿಗಳಲ್ಲಿ ನೀರು ನಿಂತು ಕಸ ಕಡ್ಡಿ ಕೊಳೆತು ನಾರುತ್ತದೆ. ಚರಂಡಿ ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು, ಕಳೆದ ವರ್ಷವೇ ಖುದ್ದು ಶಾಸಕ ಧೀರಜ್ ಮುನಿರಾಜ್ ಅವರೇ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರೂ ಏನೂ ಉಪಯೋಗವಾಗಿಲ್ಲ. ಕಸ-ಕಡ್ಡಿಗಳಿಂದ ಚರಂಡಿಗಳು ತುಂಬಿದ್ದರೂ ಜನಪ್ರತಿನಿಧಿಗಳು ಹಾಗೂ ಪಂಚಾಯಿತಿ ಅಧಿಕಾರಿಗಳು ಚರಂಡಿ ಸ್ವಚ್ಛಗೊಳಿಸುವ ಕೆಲಸ ಮಾತ್ರ ಮಾಡುತ್ತಿಲ್ಲ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದಾರೆ.
ಇನ್ನೂ ಇದೇ ಗ್ರಾಮದಲ್ಲಿ ಕೆಲ ಮನೆಗಳ ಮುಂದೆ ಸುಮಾರು 5 ವರ್ಷಗಳಿಂದ ಚರಂಡಿ ವ್ಯವಸ್ಥೆ ಇಲ್ಲದೇ ಇಲ್ಲಿನ ನಿವಾಸಿಗಳು ಪರದಾಡುತ್ತಿದ್ದಾರೆ. ಇನ್ನು ಕೆಲವು ಮನೆಗಳ ಮುಂದೆ ಚರಂಡಿಗಳು ಇದ್ದರೂ ಅವುಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವವರು ಇಲ್ಲ ಎಂದು ದೂರಿದ್ದಾರೆ.
ಇನ್ನಾದರೂ ಚರಂಡಿ ಸ್ವಚ್ಛತೆ ಮಾಡಿಸಿ ಸೊಳ್ಳೆಗಳ ಕಾಟದಿಂದ, ರೋಗ ರುಜಿನಗಳಿಂದೆ ನಮ್ಮನ್ನು ರಕ್ಷಿಸಬೇಕೇಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪಂಚಾಯಿತಿ ವತಿಯಿಂದ ಗ್ರಾಮದಲ್ಲಿರುವ ಚರಂಡಿಗಳನ್ನು ಸ್ವಚ್ಛತೆ ಮಾಡಲಾಗುತ್ತಿದೆ. ಸ್ವಚ್ಛವಾಗದ ಚರಂಡಿಗಳನ್ನು ಸಹ ಕೂಡಲೇ ಸ್ವಚ್ಛ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು. ಗ್ರಾಮಗಳ ಸ್ವಚ್ಛತೆಯೇ ನಮ್ಮ ಆದ್ಯತೆ ಎಂದು ಪಂಚಾಯಿತಿ ಅಧಿಕಾರಿ ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…