ಸ್ವಚ್ಛತೆ ಇಲ್ಲದೆ ಗಬ್ಬೆದ್ದು ನಾರುತ್ತಿರುವ ಭೋವಿಪಾಳ್ಯದ ಚರಂಡಿಗಳು

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಪಂಚಾಯಿತಿ ವ್ಯಾಪ್ತಿಯ ಭೋವಿಪಾಳ್ಯ ಗ್ರಾಮದಲ್ಲಿ ಸ್ವಚ್ಛತೆ ಇಲ್ಲದ ಚರಂಡಿಗಳು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿವೆ. ಸೊಳ್ಳೆಗಳ ಕಾಟದಿಂದಾಗಿ ಮಲೇರಿಯಾ ಮತ್ತಿತರ ರೋಗ ಹರಡುವ ಭೀತಿಯಲ್ಲಿ ಗ್ರಾಮಸ್ಥರಿದ್ದಾರೆ.

ಆಗಾಗ ಮಳೆಯಾಗುತ್ತಿರುವುದರಿಂದ ಚರಂಡಿಗಳಲ್ಲಿ ನೀರು ನಿಂತು ಕಸ ಕಡ್ಡಿ ಕೊಳೆತು ನಾರುತ್ತದೆ. ಚರಂಡಿ ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು, ಕಳೆದ ವರ್ಷವೇ ಖುದ್ದು ಶಾಸಕ ಧೀರಜ್ ಮುನಿರಾಜ್ ಅವರೇ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರೂ ಏನೂ ಉಪಯೋಗವಾಗಿಲ್ಲ. ಕಸ-ಕಡ್ಡಿಗಳಿಂದ ಚರಂಡಿಗಳು ತುಂಬಿದ್ದರೂ ಜನಪ್ರತಿನಿಧಿಗಳು ಹಾಗೂ ಪಂಚಾಯಿತಿ ಅಧಿಕಾರಿಗಳು ಚರಂಡಿ ಸ್ವಚ್ಛಗೊಳಿಸುವ ಕೆಲಸ ಮಾತ್ರ ಮಾಡುತ್ತಿಲ್ಲ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನೂ ಇದೇ ಗ್ರಾಮದಲ್ಲಿ ಕೆಲ ಮನೆಗಳ ಮುಂದೆ ಸುಮಾರು 5 ವರ್ಷಗಳಿಂದ ಚರಂಡಿ ವ್ಯವಸ್ಥೆ ಇಲ್ಲದೇ ಇಲ್ಲಿನ ನಿವಾಸಿಗಳು ಪರದಾಡುತ್ತಿದ್ದಾರೆ. ಇನ್ನು ಕೆಲವು ಮನೆಗಳ ಮುಂದೆ‌ ಚರಂಡಿಗಳು ಇದ್ದರೂ ಅವುಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವವರು ಇಲ್ಲ ಎಂದು ದೂರಿದ್ದಾರೆ.

ಇನ್ನಾದರೂ ಚರಂಡಿ ಸ್ವಚ್ಛತೆ ಮಾಡಿಸಿ ಸೊಳ್ಳೆಗಳ ಕಾಟದಿಂದ, ರೋಗ ರುಜಿನಗಳಿಂದೆ ನಮ್ಮನ್ನು ರಕ್ಷಿಸಬೇಕೇಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪಂಚಾಯಿತಿ ವತಿಯಿಂದ ಗ್ರಾಮದಲ್ಲಿರುವ ಚರಂಡಿಗಳನ್ನು ಸ್ವಚ್ಛತೆ ಮಾಡಲಾಗುತ್ತಿದೆ. ಸ್ವಚ್ಛವಾಗದ ಚರಂಡಿಗಳನ್ನು ಸಹ ಕೂಡಲೇ ಸ್ವಚ್ಛ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು. ಗ್ರಾಮಗಳ ಸ್ವಚ್ಛತೆಯೇ ನಮ್ಮ ಆದ್ಯತೆ ಎಂದು ಪಂಚಾಯಿತಿ ಅಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

11 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

13 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

14 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago