ಸ್ವಚ್ಛತೆ ಇಲ್ಲದೆ ಗಬ್ಬೆದ್ದು ನಾರುತ್ತಿರುವ ಭೋವಿಪಾಳ್ಯದ ಚರಂಡಿಗಳು

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಪಂಚಾಯಿತಿ ವ್ಯಾಪ್ತಿಯ ಭೋವಿಪಾಳ್ಯ ಗ್ರಾಮದಲ್ಲಿ ಸ್ವಚ್ಛತೆ ಇಲ್ಲದ ಚರಂಡಿಗಳು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿವೆ. ಸೊಳ್ಳೆಗಳ ಕಾಟದಿಂದಾಗಿ ಮಲೇರಿಯಾ ಮತ್ತಿತರ ರೋಗ ಹರಡುವ ಭೀತಿಯಲ್ಲಿ ಗ್ರಾಮಸ್ಥರಿದ್ದಾರೆ.

ಆಗಾಗ ಮಳೆಯಾಗುತ್ತಿರುವುದರಿಂದ ಚರಂಡಿಗಳಲ್ಲಿ ನೀರು ನಿಂತು ಕಸ ಕಡ್ಡಿ ಕೊಳೆತು ನಾರುತ್ತದೆ. ಚರಂಡಿ ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು, ಕಳೆದ ವರ್ಷವೇ ಖುದ್ದು ಶಾಸಕ ಧೀರಜ್ ಮುನಿರಾಜ್ ಅವರೇ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರೂ ಏನೂ ಉಪಯೋಗವಾಗಿಲ್ಲ. ಕಸ-ಕಡ್ಡಿಗಳಿಂದ ಚರಂಡಿಗಳು ತುಂಬಿದ್ದರೂ ಜನಪ್ರತಿನಿಧಿಗಳು ಹಾಗೂ ಪಂಚಾಯಿತಿ ಅಧಿಕಾರಿಗಳು ಚರಂಡಿ ಸ್ವಚ್ಛಗೊಳಿಸುವ ಕೆಲಸ ಮಾತ್ರ ಮಾಡುತ್ತಿಲ್ಲ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನೂ ಇದೇ ಗ್ರಾಮದಲ್ಲಿ ಕೆಲ ಮನೆಗಳ ಮುಂದೆ ಸುಮಾರು 5 ವರ್ಷಗಳಿಂದ ಚರಂಡಿ ವ್ಯವಸ್ಥೆ ಇಲ್ಲದೇ ಇಲ್ಲಿನ ನಿವಾಸಿಗಳು ಪರದಾಡುತ್ತಿದ್ದಾರೆ. ಇನ್ನು ಕೆಲವು ಮನೆಗಳ ಮುಂದೆ‌ ಚರಂಡಿಗಳು ಇದ್ದರೂ ಅವುಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವವರು ಇಲ್ಲ ಎಂದು ದೂರಿದ್ದಾರೆ.

ಇನ್ನಾದರೂ ಚರಂಡಿ ಸ್ವಚ್ಛತೆ ಮಾಡಿಸಿ ಸೊಳ್ಳೆಗಳ ಕಾಟದಿಂದ, ರೋಗ ರುಜಿನಗಳಿಂದೆ ನಮ್ಮನ್ನು ರಕ್ಷಿಸಬೇಕೇಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪಂಚಾಯಿತಿ ವತಿಯಿಂದ ಗ್ರಾಮದಲ್ಲಿರುವ ಚರಂಡಿಗಳನ್ನು ಸ್ವಚ್ಛತೆ ಮಾಡಲಾಗುತ್ತಿದೆ. ಸ್ವಚ್ಛವಾಗದ ಚರಂಡಿಗಳನ್ನು ಸಹ ಕೂಡಲೇ ಸ್ವಚ್ಛ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು. ಗ್ರಾಮಗಳ ಸ್ವಚ್ಛತೆಯೇ ನಮ್ಮ ಆದ್ಯತೆ ಎಂದು ಪಂಚಾಯಿತಿ ಅಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

3 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

4 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

15 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

16 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago