ಸ್ವಚ್ಛತೆ ಇಲ್ಲದೆ ಗಬ್ಬೆದ್ದು ನಾರುತ್ತಿರುವ ಭೋವಿಪಾಳ್ಯದ ಚರಂಡಿಗಳು

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಪಂಚಾಯಿತಿ ವ್ಯಾಪ್ತಿಯ ಭೋವಿಪಾಳ್ಯ ಗ್ರಾಮದಲ್ಲಿ ಸ್ವಚ್ಛತೆ ಇಲ್ಲದ ಚರಂಡಿಗಳು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿವೆ. ಸೊಳ್ಳೆಗಳ ಕಾಟದಿಂದಾಗಿ ಮಲೇರಿಯಾ ಮತ್ತಿತರ ರೋಗ ಹರಡುವ ಭೀತಿಯಲ್ಲಿ ಗ್ರಾಮಸ್ಥರಿದ್ದಾರೆ.

ಆಗಾಗ ಮಳೆಯಾಗುತ್ತಿರುವುದರಿಂದ ಚರಂಡಿಗಳಲ್ಲಿ ನೀರು ನಿಂತು ಕಸ ಕಡ್ಡಿ ಕೊಳೆತು ನಾರುತ್ತದೆ. ಚರಂಡಿ ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು, ಕಳೆದ ವರ್ಷವೇ ಖುದ್ದು ಶಾಸಕ ಧೀರಜ್ ಮುನಿರಾಜ್ ಅವರೇ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರೂ ಏನೂ ಉಪಯೋಗವಾಗಿಲ್ಲ. ಕಸ-ಕಡ್ಡಿಗಳಿಂದ ಚರಂಡಿಗಳು ತುಂಬಿದ್ದರೂ ಜನಪ್ರತಿನಿಧಿಗಳು ಹಾಗೂ ಪಂಚಾಯಿತಿ ಅಧಿಕಾರಿಗಳು ಚರಂಡಿ ಸ್ವಚ್ಛಗೊಳಿಸುವ ಕೆಲಸ ಮಾತ್ರ ಮಾಡುತ್ತಿಲ್ಲ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನೂ ಇದೇ ಗ್ರಾಮದಲ್ಲಿ ಕೆಲ ಮನೆಗಳ ಮುಂದೆ ಸುಮಾರು 5 ವರ್ಷಗಳಿಂದ ಚರಂಡಿ ವ್ಯವಸ್ಥೆ ಇಲ್ಲದೇ ಇಲ್ಲಿನ ನಿವಾಸಿಗಳು ಪರದಾಡುತ್ತಿದ್ದಾರೆ. ಇನ್ನು ಕೆಲವು ಮನೆಗಳ ಮುಂದೆ‌ ಚರಂಡಿಗಳು ಇದ್ದರೂ ಅವುಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವವರು ಇಲ್ಲ ಎಂದು ದೂರಿದ್ದಾರೆ.

ಇನ್ನಾದರೂ ಚರಂಡಿ ಸ್ವಚ್ಛತೆ ಮಾಡಿಸಿ ಸೊಳ್ಳೆಗಳ ಕಾಟದಿಂದ, ರೋಗ ರುಜಿನಗಳಿಂದೆ ನಮ್ಮನ್ನು ರಕ್ಷಿಸಬೇಕೇಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪಂಚಾಯಿತಿ ವತಿಯಿಂದ ಗ್ರಾಮದಲ್ಲಿರುವ ಚರಂಡಿಗಳನ್ನು ಸ್ವಚ್ಛತೆ ಮಾಡಲಾಗುತ್ತಿದೆ. ಸ್ವಚ್ಛವಾಗದ ಚರಂಡಿಗಳನ್ನು ಸಹ ಕೂಡಲೇ ಸ್ವಚ್ಛ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು. ಗ್ರಾಮಗಳ ಸ್ವಚ್ಛತೆಯೇ ನಮ್ಮ ಆದ್ಯತೆ ಎಂದು ಪಂಚಾಯಿತಿ ಅಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಶಂಕಿತ ಎಬೋಲಾ ಪ್ರಕರಣ: ಪ್ರಯೋಗಾಲಯ ತಪಾಸಣಾ ವರದಿ ಔಟ್: ವರದಿಯಲ್ಲಿ ಏನಿದೆ…?

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಈಗ ಬಂದಿದ್ದು, ಸಂಪೂರ್ಣವಾಗಿ 'ನೆಗೆಟಿವ್' ಆಗಿದೆ. ಆ ವ್ಯಕ್ತಿಗೆ…

3 hours ago

ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಸೆ.30 ರವರೆಗೆ ಅವಕಾಶ

ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಅವಕಾಶ…

3 hours ago

ರಾಜ್ಯ ರಾಜಕೀಯದಲ್ಲಿ ಮತ್ತೆ ತೀವ್ರಗೊಂಡ ನಾಯಕತ್ವ ಬದಲಾವಣೆಯ ಚರ್ಚೆ: ‘ಮುಂದಿನ ಸಿಎಂ ಡಿ.ಕೆ. ಶಿವಕುಮಾರ್’ ಎಂಬ ಪೋಸ್ಟರ್‌, ಬ್ಯಾನರ್‌ ಮತ್ತು ಸಾಮಾಜಿಕ ಜಾಲತಾಣ ಪೋಸ್ಟ್‌ಗಳು ವೈರಲ್

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ…

4 hours ago

ಬಗರ್ ಹುಕ್ಕುಂ ಸಮಿತಿ ಸಭೆ ವಿಳಂಬ: ಹಕ್ಕುಪತ್ರಕ್ಕಾಗಿ ರೈತರ ಅಲೆದಾಟ: ಅರ್ಜಿ ಸಲ್ಲಿಸಿ ವರ್ಷಗಳಾದರೂ ಸಾಗುವಳಿ ಚೀಟಿ ಇಲ್ಲ: ಆತಂಕದಲ್ಲಿ ರೈತ

ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…

11 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

1 day ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

2 days ago