ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಪಂಚಾಯಿತಿ ವ್ಯಾಪ್ತಿಯ ಭೋವಿಪಾಳ್ಯ ಗ್ರಾಮದಲ್ಲಿ ಸ್ವಚ್ಛತೆ ಇಲ್ಲದ ಚರಂಡಿಗಳು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿವೆ. ಸೊಳ್ಳೆಗಳ ಕಾಟದಿಂದಾಗಿ ಮಲೇರಿಯಾ ಮತ್ತಿತರ ರೋಗ ಹರಡುವ ಭೀತಿಯಲ್ಲಿ ಗ್ರಾಮಸ್ಥರಿದ್ದಾರೆ.
ಆಗಾಗ ಮಳೆಯಾಗುತ್ತಿರುವುದರಿಂದ ಚರಂಡಿಗಳಲ್ಲಿ ನೀರು ನಿಂತು ಕಸ ಕಡ್ಡಿ ಕೊಳೆತು ನಾರುತ್ತದೆ. ಚರಂಡಿ ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು, ಕಳೆದ ವರ್ಷವೇ ಖುದ್ದು ಶಾಸಕ ಧೀರಜ್ ಮುನಿರಾಜ್ ಅವರೇ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರೂ ಏನೂ ಉಪಯೋಗವಾಗಿಲ್ಲ. ಕಸ-ಕಡ್ಡಿಗಳಿಂದ ಚರಂಡಿಗಳು ತುಂಬಿದ್ದರೂ ಜನಪ್ರತಿನಿಧಿಗಳು ಹಾಗೂ ಪಂಚಾಯಿತಿ ಅಧಿಕಾರಿಗಳು ಚರಂಡಿ ಸ್ವಚ್ಛಗೊಳಿಸುವ ಕೆಲಸ ಮಾತ್ರ ಮಾಡುತ್ತಿಲ್ಲ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದಾರೆ.
ಇನ್ನೂ ಇದೇ ಗ್ರಾಮದಲ್ಲಿ ಕೆಲ ಮನೆಗಳ ಮುಂದೆ ಸುಮಾರು 5 ವರ್ಷಗಳಿಂದ ಚರಂಡಿ ವ್ಯವಸ್ಥೆ ಇಲ್ಲದೇ ಇಲ್ಲಿನ ನಿವಾಸಿಗಳು ಪರದಾಡುತ್ತಿದ್ದಾರೆ. ಇನ್ನು ಕೆಲವು ಮನೆಗಳ ಮುಂದೆ ಚರಂಡಿಗಳು ಇದ್ದರೂ ಅವುಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವವರು ಇಲ್ಲ ಎಂದು ದೂರಿದ್ದಾರೆ.
ಇನ್ನಾದರೂ ಚರಂಡಿ ಸ್ವಚ್ಛತೆ ಮಾಡಿಸಿ ಸೊಳ್ಳೆಗಳ ಕಾಟದಿಂದ, ರೋಗ ರುಜಿನಗಳಿಂದೆ ನಮ್ಮನ್ನು ರಕ್ಷಿಸಬೇಕೇಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪಂಚಾಯಿತಿ ವತಿಯಿಂದ ಗ್ರಾಮದಲ್ಲಿರುವ ಚರಂಡಿಗಳನ್ನು ಸ್ವಚ್ಛತೆ ಮಾಡಲಾಗುತ್ತಿದೆ. ಸ್ವಚ್ಛವಾಗದ ಚರಂಡಿಗಳನ್ನು ಸಹ ಕೂಡಲೇ ಸ್ವಚ್ಛ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು. ಗ್ರಾಮಗಳ ಸ್ವಚ್ಛತೆಯೇ ನಮ್ಮ ಆದ್ಯತೆ ಎಂದು ಪಂಚಾಯಿತಿ ಅಧಿಕಾರಿ ತಿಳಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…