ಕರ್ನಾಟಕ ಅಲ್ಪಸಂಖ್ಯಾತ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ನಿರುದ್ಯೋಗ ಹೊಂದಿರುವ ಯುವಕ ಯುವತಿಯರಿಗೆ ಸ್ವಂತ ಉದ್ಯೋಗ/ಕಚೇರಿ, ಕಂಪನಿ, ಕಾರ್ಖಾನೆಗಳಲ್ಲಿ ಉದ್ಯೋಗ ದೊರಕಿಸುವ ಸಲುವಾಗಿ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳಲು ಪ್ರಸ್ತಾಪಿಸಲಾಗಿದೆ. ಮಾನ್ಯತೆ ಪಡೆದ ಕೇಂದ್ರಗಳೊಂದಿಗೆ ಬ್ಯೂಟಿ ಪಾರ್ಲರ್ ತರಬೇತಿ (ಪುರುಷರು ಮತ್ತು ಮಹಿಳೆಯರು) ಪ್ರಮಾಣೀಕರಣ ಕೋರ್ಸ್
• Beauty Parlour Training (Men and Women) certification course with recognized centres.
• ಹೆವಿ ಅರ್ಥ್ ಮೂವರ್ ತರಬೇತಿ (ಜೆಸಿಬಿ, ಕ್ರೇನ್, ಪೋಕ್ ಲೇನ್ ಸೇರಿದಂತೆ ಭಾರಿ ವಾಹನ ಚಾಲನಾ ತರಬೇತಿ)
• Heavy Earth Mover Operatoin Training (JCB, Crane, Pock lain, Heavy Vehicle Operation)
• ಶಾರ್ಟ್ ಹ್ಯಾಂಡ್ ಟ್ರೈನಿಂಗ್ Short hand training
• ಭದ್ರತಾ ಸೇವೆಗಳ ತರಬೇತಿ Security Services Training
ಅರ್ಜಿ ಸಲ್ಲಿಸಲು ಆರ್ಜಿದಾರರ ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಆಯ್ಕೆಯಾದ ಅರ್ಜಿದಾರರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು, ಅಭ್ಯರ್ಥಿಯು ಬೇರೆ ಯಾವುದೇ ಸರ್ಕಾರದ ವತಿಯಿಂದ ವೃತ್ತಿ ಪರ ತರಬೇತಿಯನ್ನು ಪಡೆದಿರಬಾರದು, ಎಲ್ಲಾ ಮೂಲಗಳಿಂದ ಕುಟುಂಬದ ಆದಾಯ ನಗರ ಪ್ರದೇಶಗಳಲ್ಲಿ ರೂ.1,03,000/-, ಗ್ರಾಮಾಂತರ ಪ್ರದೇಶದಲ್ಲಿ ರೂ.96,000 ಮೀರಬಾರದು, ತರಬೇತಿಯನ್ನು ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ವಲಯ ಮತ್ತು ಮಾನ್ಯತೆ ಪಡೆದ ಖಾಸಗಿ ಸಂಸ್ಥೆಗಳಿಂದ
ನೀಡಲಾಗುವುದು.
ಅರ್ಜಿ ಯನ್ನು ಆನ್ ಲೈನ್ ವೆಬ್ ಸೈಟ್
https://kmdconline.karnataka.gov.in ಮೂಲಕ ಆಗಸ್ಟ್ 22 ರಿಂದ ಕೊನೆಯ ದಿನಾಂಕ ಸಪ್ಟೆಂಬರ್ 25 ರವರೆಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ,
ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.1599, ವೈ.ಎಸ್ ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಬಭಾಗ, ಯಲಹಂಕ ಬೀದಿ,
ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: (080)-27681786 ಅಥವಾ
Gmail: kmdcbrural@gmail.com, ಸಹಾಯವಾಣಿ ಸಂಖ್ಯೆ-8277799990 (24×7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…