ಸ್ವಯಂ, ಕಂಪನಿ, ಕಚೇರಿ ಉದ್ಯೋಗ ಆಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ನಿರುದ್ಯೋಗ ಹೊಂದಿರುವ ಯುವಕ ಯುವತಿಯರಿಗೆ ಸ್ವಂತ ಉದ್ಯೋಗ/ಕಚೇರಿ, ಕಂಪನಿ, ಕಾರ್ಖಾನೆಗಳಲ್ಲಿ ಉದ್ಯೋಗ ದೊರಕಿಸುವ ಸಲುವಾಗಿ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳಲು ಪ್ರಸ್ತಾಪಿಸಲಾಗಿದೆ. ಮಾನ್ಯತೆ ಪಡೆದ ಕೇಂದ್ರಗಳೊಂದಿಗೆ ಬ್ಯೂಟಿ ಪಾರ್ಲರ್ ತರಬೇತಿ (ಪುರುಷರು ಮತ್ತು ಮಹಿಳೆಯರು) ಪ್ರಮಾಣೀಕರಣ ಕೋರ್ಸ್

• Beauty Parlour Training (Men and Women) certification course with recognized centres.
• ಹೆವಿ ಅರ್ಥ್ ಮೂವ‌ರ್ ತರಬೇತಿ (ಜೆಸಿಬಿ, ಕ್ರೇನ್, ಪೋಕ್ ಲೇನ್ ಸೇರಿದಂತೆ ಭಾರಿ ವಾಹನ ಚಾಲನಾ ತರಬೇತಿ)
• Heavy Earth Mover Operatoin Training (JCB, Crane, Pock lain, Heavy Vehicle Operation)
• ಶಾರ್ಟ್ ಹ್ಯಾಂಡ್ ಟ್ರೈನಿಂಗ್ Short hand training
• ಭದ್ರತಾ ಸೇವೆಗಳ ತರಬೇತಿ Security Services Training

ಅರ್ಜಿ ಸಲ್ಲಿಸಲು ಆರ್ಜಿದಾರರ ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಆಯ್ಕೆಯಾದ ಅರ್ಜಿದಾರರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು, ಅಭ್ಯರ್ಥಿಯು ಬೇರೆ ಯಾವುದೇ ಸರ್ಕಾರದ ವತಿಯಿಂದ ವೃತ್ತಿ ಪರ ತರಬೇತಿಯನ್ನು ಪಡೆದಿರಬಾರದು, ಎಲ್ಲಾ ಮೂಲಗಳಿಂದ ಕುಟುಂಬದ ಆದಾಯ ನಗರ ಪ್ರದೇಶಗಳಲ್ಲಿ ರೂ.1,03,000/-, ಗ್ರಾಮಾಂತರ ಪ್ರದೇಶದಲ್ಲಿ ರೂ.96,000 ಮೀರಬಾರದು, ತರಬೇತಿಯನ್ನು ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ವಲಯ ಮತ್ತು ಮಾನ್ಯತೆ ಪಡೆದ ಖಾಸಗಿ ಸಂಸ್ಥೆಗಳಿಂದ
ನೀಡಲಾಗುವುದು.

ಅರ್ಜಿ ಯನ್ನು ಆನ್ ಲೈನ್ ವೆಬ್ ಸೈಟ್
https://kmdconline.karnataka.gov.in ಮೂಲಕ ಆಗಸ್ಟ್ 22 ರಿಂದ ಕೊನೆಯ ದಿನಾಂಕ ಸಪ್ಟೆಂಬರ್ 25 ರವರೆಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ,
ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.1599, ವೈ.ಎಸ್ ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಬಭಾಗ, ಯಲಹಂಕ ಬೀದಿ,
ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: (080)-27681786 ಅಥವಾ
Gmail: kmdcbrural@gmail.com, ಸಹಾಯವಾಣಿ ಸಂಖ್ಯೆ-8277799990 (24×7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago