ಕರ್ನಾಟಕ ಅಲ್ಪಸಂಖ್ಯಾತ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ನಿರುದ್ಯೋಗ ಹೊಂದಿರುವ ಯುವಕ ಯುವತಿಯರಿಗೆ ಸ್ವಂತ ಉದ್ಯೋಗ/ಕಚೇರಿ, ಕಂಪನಿ, ಕಾರ್ಖಾನೆಗಳಲ್ಲಿ ಉದ್ಯೋಗ ದೊರಕಿಸುವ ಸಲುವಾಗಿ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳಲು ಪ್ರಸ್ತಾಪಿಸಲಾಗಿದೆ. ಮಾನ್ಯತೆ ಪಡೆದ ಕೇಂದ್ರಗಳೊಂದಿಗೆ ಬ್ಯೂಟಿ ಪಾರ್ಲರ್ ತರಬೇತಿ (ಪುರುಷರು ಮತ್ತು ಮಹಿಳೆಯರು) ಪ್ರಮಾಣೀಕರಣ ಕೋರ್ಸ್
• Beauty Parlour Training (Men and Women) certification course with recognized centres.
• ಹೆವಿ ಅರ್ಥ್ ಮೂವರ್ ತರಬೇತಿ (ಜೆಸಿಬಿ, ಕ್ರೇನ್, ಪೋಕ್ ಲೇನ್ ಸೇರಿದಂತೆ ಭಾರಿ ವಾಹನ ಚಾಲನಾ ತರಬೇತಿ)
• Heavy Earth Mover Operatoin Training (JCB, Crane, Pock lain, Heavy Vehicle Operation)
• ಶಾರ್ಟ್ ಹ್ಯಾಂಡ್ ಟ್ರೈನಿಂಗ್ Short hand training
• ಭದ್ರತಾ ಸೇವೆಗಳ ತರಬೇತಿ Security Services Training
ಅರ್ಜಿ ಸಲ್ಲಿಸಲು ಆರ್ಜಿದಾರರ ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಆಯ್ಕೆಯಾದ ಅರ್ಜಿದಾರರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು, ಅಭ್ಯರ್ಥಿಯು ಬೇರೆ ಯಾವುದೇ ಸರ್ಕಾರದ ವತಿಯಿಂದ ವೃತ್ತಿ ಪರ ತರಬೇತಿಯನ್ನು ಪಡೆದಿರಬಾರದು, ಎಲ್ಲಾ ಮೂಲಗಳಿಂದ ಕುಟುಂಬದ ಆದಾಯ ನಗರ ಪ್ರದೇಶಗಳಲ್ಲಿ ರೂ.1,03,000/-, ಗ್ರಾಮಾಂತರ ಪ್ರದೇಶದಲ್ಲಿ ರೂ.96,000 ಮೀರಬಾರದು, ತರಬೇತಿಯನ್ನು ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ವಲಯ ಮತ್ತು ಮಾನ್ಯತೆ ಪಡೆದ ಖಾಸಗಿ ಸಂಸ್ಥೆಗಳಿಂದ
ನೀಡಲಾಗುವುದು.
ಅರ್ಜಿ ಯನ್ನು ಆನ್ ಲೈನ್ ವೆಬ್ ಸೈಟ್
https://kmdconline.karnataka.gov.in ಮೂಲಕ ಆಗಸ್ಟ್ 22 ರಿಂದ ಕೊನೆಯ ದಿನಾಂಕ ಸಪ್ಟೆಂಬರ್ 25 ರವರೆಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ,
ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.1599, ವೈ.ಎಸ್ ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಬಭಾಗ, ಯಲಹಂಕ ಬೀದಿ,
ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: (080)-27681786 ಅಥವಾ
Gmail: kmdcbrural@gmail.com, ಸಹಾಯವಾಣಿ ಸಂಖ್ಯೆ-8277799990 (24×7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…