ಕರ್ನಾಟಕ ಅಲ್ಪಸಂಖ್ಯಾತ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ನಿರುದ್ಯೋಗ ಹೊಂದಿರುವ ಯುವಕ ಯುವತಿಯರಿಗೆ ಸ್ವಂತ ಉದ್ಯೋಗ/ಕಚೇರಿ, ಕಂಪನಿ, ಕಾರ್ಖಾನೆಗಳಲ್ಲಿ ಉದ್ಯೋಗ ದೊರಕಿಸುವ ಸಲುವಾಗಿ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳಲು ಪ್ರಸ್ತಾಪಿಸಲಾಗಿದೆ. ಮಾನ್ಯತೆ ಪಡೆದ ಕೇಂದ್ರಗಳೊಂದಿಗೆ ಬ್ಯೂಟಿ ಪಾರ್ಲರ್ ತರಬೇತಿ (ಪುರುಷರು ಮತ್ತು ಮಹಿಳೆಯರು) ಪ್ರಮಾಣೀಕರಣ ಕೋರ್ಸ್
• Beauty Parlour Training (Men and Women) certification course with recognized centres.
• ಹೆವಿ ಅರ್ಥ್ ಮೂವರ್ ತರಬೇತಿ (ಜೆಸಿಬಿ, ಕ್ರೇನ್, ಪೋಕ್ ಲೇನ್ ಸೇರಿದಂತೆ ಭಾರಿ ವಾಹನ ಚಾಲನಾ ತರಬೇತಿ)
• Heavy Earth Mover Operatoin Training (JCB, Crane, Pock lain, Heavy Vehicle Operation)
• ಶಾರ್ಟ್ ಹ್ಯಾಂಡ್ ಟ್ರೈನಿಂಗ್ Short hand training
• ಭದ್ರತಾ ಸೇವೆಗಳ ತರಬೇತಿ Security Services Training
ಅರ್ಜಿ ಸಲ್ಲಿಸಲು ಆರ್ಜಿದಾರರ ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಆಯ್ಕೆಯಾದ ಅರ್ಜಿದಾರರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು, ಅಭ್ಯರ್ಥಿಯು ಬೇರೆ ಯಾವುದೇ ಸರ್ಕಾರದ ವತಿಯಿಂದ ವೃತ್ತಿ ಪರ ತರಬೇತಿಯನ್ನು ಪಡೆದಿರಬಾರದು, ಎಲ್ಲಾ ಮೂಲಗಳಿಂದ ಕುಟುಂಬದ ಆದಾಯ ನಗರ ಪ್ರದೇಶಗಳಲ್ಲಿ ರೂ.1,03,000/-, ಗ್ರಾಮಾಂತರ ಪ್ರದೇಶದಲ್ಲಿ ರೂ.96,000 ಮೀರಬಾರದು, ತರಬೇತಿಯನ್ನು ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ವಲಯ ಮತ್ತು ಮಾನ್ಯತೆ ಪಡೆದ ಖಾಸಗಿ ಸಂಸ್ಥೆಗಳಿಂದ
ನೀಡಲಾಗುವುದು.
ಅರ್ಜಿ ಯನ್ನು ಆನ್ ಲೈನ್ ವೆಬ್ ಸೈಟ್
https://kmdconline.karnataka.gov.in ಮೂಲಕ ಆಗಸ್ಟ್ 22 ರಿಂದ ಕೊನೆಯ ದಿನಾಂಕ ಸಪ್ಟೆಂಬರ್ 25 ರವರೆಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ,
ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.1599, ವೈ.ಎಸ್ ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಬಭಾಗ, ಯಲಹಂಕ ಬೀದಿ,
ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: (080)-27681786 ಅಥವಾ
Gmail: kmdcbrural@gmail.com, ಸಹಾಯವಾಣಿ ಸಂಖ್ಯೆ-8277799990 (24×7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…