ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬ:ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ಗಣೇಶ ವಿಗ್ರಹಗಳಿಗೆ ನಿಷೇಧ

ಇದೇ ಆಗಸ್ಟ್ 26 ಮತ್ತು 27 ರಂದು ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬದ ಆಚರಣೆ ಮಾಡುವ ಸಲುವಾಗಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ನಿಷೇಧಿಸಿದೆ.

ಸಾರ್ವಜನಿಕರು ಸಾಮಾನ್ಯವಾಗಿ ಪಿ.ಒ.ಪಿ ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ,ಬಾವಿ, ಕಲ್ಯಾಣಿಗಳಲ್ಲಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ರೀತಿ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳುತ್ತವೆ. ಪಿಒಪಿ ವಿಗ್ರಹಗಳಿಂದ ಭೌತಿಕ ಹಾಗೂ ರಾಸಾಯನಿಕವಾಗಿ ನೀರಿನ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ಆಗುವ ದುಷ್ಪರಿಣಾಮದಿಂದ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅದಲ್ಲದೆ ಅ ನೀರನ್ನು ಬಳಸುವುದರಿಂದ ಮನುಷ್ಯನ ಆರೋಗ್ಯದಲ್ಲಿ ಏರು-ಪೇರು ಉಂಟಾಗುತ್ತದೆ.

ಪಿಒಪಿ ವಿಗ್ರಹಗಳು ನೀರಿನಲ್ಲಿ ಕರಗುವುದಿಲ್ಲ ಮತ್ತು ನೀರಿನ ಮೂಲಗಳ ಆಮ್ಲೀಯತೆಯನ್ನು ಹೆಚ್ಚಿಸುವುದರಿಂದ ಜಲಚರಗಳಿಗೆ ಹಾನಿಕಾರಕವಾಗಿದೆ. ಜಲಮೂಲಗಳ ಮಾಲಿನ್ಯದಿಂದಾಗಿ ಇಡೀ ಪರಿಸರ ವ್ಯವಸ್ಥೆಯು ಅಸಮತೋಲನಗೊಳ್ಳುತ್ತದೆ. ಪ್ಲಾಸ್ಟರ್ ಅಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ ಕಾಯ್ದೆ ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ ಅಥವಾ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ,
ತದನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವುದು.

ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ,ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಮತ್ತು ಒಣಕಸವಾಗಿ ಪ್ರತ್ಯೇಕಿಸಬೇಕು.

ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಅಲಂಕಾರಕ್ಕೆ ಮತ್ತು ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು, ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬೇಡಿ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Ramesh Babu

Journalist

Recent Posts

“ಕುವೆಂಪು”….. ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…

2 hours ago

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

1 day ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

1 day ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

2 days ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

2 days ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

2 days ago