ಇದೇ ಆಗಸ್ಟ್ 26 ಮತ್ತು 27 ರಂದು ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬದ ಆಚರಣೆ ಮಾಡುವ ಸಲುವಾಗಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ನಿಷೇಧಿಸಿದೆ.
ಸಾರ್ವಜನಿಕರು ಸಾಮಾನ್ಯವಾಗಿ ಪಿ.ಒ.ಪಿ ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ,ಬಾವಿ, ಕಲ್ಯಾಣಿಗಳಲ್ಲಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ರೀತಿ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳುತ್ತವೆ. ಪಿಒಪಿ ವಿಗ್ರಹಗಳಿಂದ ಭೌತಿಕ ಹಾಗೂ ರಾಸಾಯನಿಕವಾಗಿ ನೀರಿನ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ಆಗುವ ದುಷ್ಪರಿಣಾಮದಿಂದ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅದಲ್ಲದೆ ಅ ನೀರನ್ನು ಬಳಸುವುದರಿಂದ ಮನುಷ್ಯನ ಆರೋಗ್ಯದಲ್ಲಿ ಏರು-ಪೇರು ಉಂಟಾಗುತ್ತದೆ.
ಪಿಒಪಿ ವಿಗ್ರಹಗಳು ನೀರಿನಲ್ಲಿ ಕರಗುವುದಿಲ್ಲ ಮತ್ತು ನೀರಿನ ಮೂಲಗಳ ಆಮ್ಲೀಯತೆಯನ್ನು ಹೆಚ್ಚಿಸುವುದರಿಂದ ಜಲಚರಗಳಿಗೆ ಹಾನಿಕಾರಕವಾಗಿದೆ. ಜಲಮೂಲಗಳ ಮಾಲಿನ್ಯದಿಂದಾಗಿ ಇಡೀ ಪರಿಸರ ವ್ಯವಸ್ಥೆಯು ಅಸಮತೋಲನಗೊಳ್ಳುತ್ತದೆ. ಪ್ಲಾಸ್ಟರ್ ಅಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ ಕಾಯ್ದೆ ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ ಅಥವಾ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ,
ತದನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವುದು.
ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ,ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಮತ್ತು ಒಣಕಸವಾಗಿ ಪ್ರತ್ಯೇಕಿಸಬೇಕು.
ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಅಲಂಕಾರಕ್ಕೆ ಮತ್ತು ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು, ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬೇಡಿ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…