ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬ:ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ಗಣೇಶ ವಿಗ್ರಹಗಳಿಗೆ ನಿಷೇಧ

ಇದೇ ಆಗಸ್ಟ್ 26 ಮತ್ತು 27 ರಂದು ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬದ ಆಚರಣೆ ಮಾಡುವ ಸಲುವಾಗಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ನಿಷೇಧಿಸಿದೆ.

ಸಾರ್ವಜನಿಕರು ಸಾಮಾನ್ಯವಾಗಿ ಪಿ.ಒ.ಪಿ ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ,ಬಾವಿ, ಕಲ್ಯಾಣಿಗಳಲ್ಲಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ರೀತಿ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳುತ್ತವೆ. ಪಿಒಪಿ ವಿಗ್ರಹಗಳಿಂದ ಭೌತಿಕ ಹಾಗೂ ರಾಸಾಯನಿಕವಾಗಿ ನೀರಿನ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ಆಗುವ ದುಷ್ಪರಿಣಾಮದಿಂದ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅದಲ್ಲದೆ ಅ ನೀರನ್ನು ಬಳಸುವುದರಿಂದ ಮನುಷ್ಯನ ಆರೋಗ್ಯದಲ್ಲಿ ಏರು-ಪೇರು ಉಂಟಾಗುತ್ತದೆ.

ಪಿಒಪಿ ವಿಗ್ರಹಗಳು ನೀರಿನಲ್ಲಿ ಕರಗುವುದಿಲ್ಲ ಮತ್ತು ನೀರಿನ ಮೂಲಗಳ ಆಮ್ಲೀಯತೆಯನ್ನು ಹೆಚ್ಚಿಸುವುದರಿಂದ ಜಲಚರಗಳಿಗೆ ಹಾನಿಕಾರಕವಾಗಿದೆ. ಜಲಮೂಲಗಳ ಮಾಲಿನ್ಯದಿಂದಾಗಿ ಇಡೀ ಪರಿಸರ ವ್ಯವಸ್ಥೆಯು ಅಸಮತೋಲನಗೊಳ್ಳುತ್ತದೆ. ಪ್ಲಾಸ್ಟರ್ ಅಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ ಕಾಯ್ದೆ ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ ಅಥವಾ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ,
ತದನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವುದು.

ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ,ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಮತ್ತು ಒಣಕಸವಾಗಿ ಪ್ರತ್ಯೇಕಿಸಬೇಕು.

ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಅಲಂಕಾರಕ್ಕೆ ಮತ್ತು ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು, ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬೇಡಿ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Ramesh Babu

Journalist

Recent Posts

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

3 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

4 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

12 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

20 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

21 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago