ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ – ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್

ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬಗಳನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ಶಿವಶಂಕರ್. ಎನ್. ಅವರು ಕರೆ ನೀಡಿದ್ದಾರೆ.

ಗೌರಿ ಹಾಗೂ ಗಣೇಶನ ಹಬ್ಬದ ಪ್ರಯುಕ್ತ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ಪ್ರತಿಮೆಗಳ ವಿಸರ್ಜನೆಯಿಂದ ನೈಸರ್ಗಿಕ ಜಲಮೂಲಗಳಲ್ಲಿ ಜಲ ಮಾಲಿನ್ಯ ಉಂಟಾಗುವುದು. ಮಾನ್ಯ ಉಚ್ಛ ನ್ಯಾಯಾಲಯ ಆದೇಶ ದಿನಾಂಕ : 18- 06-2019 ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆ ತಿಳಿಸಿರುವಂತೆ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಲ ಮಾಲಿನ್ಯ ತಡೆಗಟ್ಟುವ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳು

1. ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಸಂಸ್ಥೆಗಳಿಗೆ ವ್ಯಾಪಾರ ಲೈಸನ್ ನೀಡದಿರಲು ಮತ್ತು ಲೈಸೆನ್ಸ್‌ ಪಡೆಯದೇ ಅನಧಿಕೃತವಾಗಿ ತಯಾರಿ ಮಾರಾಟ ಮಾಡುವ ವ್ಯಕ್ತಿ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸುವುದು.

2. ಸದರಿ ಅಧಿಸೂಚನೆಯ ಅನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್ / ಬಣ್ಣ ಲೇಪಿತ ಮೂರ್ತಿಗಳನ್ನು ಯಾವುದೇ ನದಿ / ಕಾಲುವೆ / ಬಾವಿಗಳಲ್ಲಿ, ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐ.ಪಿ.ಎಸ್ ಸೆಕ್ಷನ್ 1860) ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.

3. ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ವಿಸರ್ಜಿಸುವುದು.

4. ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ, ಮೊಬೈಲ್, ಟ್ಯಾಂಕ್‌ಗಳಲ್ಲಿ/ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು,

5. ನೈಸರ್ಗಿಕ – ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್, ಟ್ಯಾಂಕ್‌ಗಳಲ್ಲಿ ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ
ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲು ಕ್ರಮ ವಹಿಸುವುದು.

6.ವಾರ್ಡ್‌ ಮಟ್ಟದಲ್ಲಿ ಪೊಲೀಸರ ಸಹಯೋಗದೊಂದಿಗೆ ಸಮಿತಿಗಳನ್ನು ರಚಿಸಿ, ಗಣೇಶ ಮೂರ್ತಿಗಳ ಸೂಕ್ತ ವಿಲೇವಾರಿಗೆ ಕ್ರಮ ಕೈಗೊಳ್ಳುವುದು.

7. ಸಾರ್ವಜನಿಕವಾಗಿ ಇಡಲಾಗುವ ಗಣೇಶ ಮೂರ್ತಿಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು, ಈ ಅನುಮತಿ ಪತ್ರಗಳಲ್ಲಿ ಲೈಸೆನ್ಸ್‌ ನೀಡುವ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ಫ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10.00 ರಿಂದ ಬೆಳಗ್ಗೆ 6.00 ಗಂಟೆಯ ವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸುವುದು.

8. ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗದಿಪಡಿಸುವುದು ಮತ್ತು ಈ ಬಗ್ಗೆ ಸೂಕ್ತ ಪ್ರಕಟಣೆಯನ್ನು ಹೊರಡಿಸುವುದು.

9. ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಿ.ಒ.ಪಿ ಮತ್ತು ಬಣ್ಣದ ಮೂರ್ತಿಗಳ ತಯಾರಿ ಕಂಡು ಬಂದಲ್ಲಿ ತನಿಖೆ ಮಾಡಿ ಸುಪರ್ದಿಗೆ ತೆಗೆದುಕೊಳ್ಳಲು ಕ್ರಮ ವಹಿಸುವುದು.

10. ಜಿಲ್ಲೆ ಅಥವಾ ತಾಲ್ಲೂಕುಗಳಿಗೆ ಬೇರೆ ಸ್ಥಳಗಳಿಂದ ಬರುವಂತಹ ಪಿ.ಒ.ಪಿ. ಮೂರ್ತಿಗಳನ್ನು ತಡೆಗಟ್ಟಲು ಸಂಬಂಧಿಸಿದ ಚೆಕ್ ಪೋಸ್ಟ್ ಅಧಿಕಾರಿಗಳು ಸೂಕ್ತ ಕ್ರಮ ವಹಿಸುವುದು.

11. ಕರ್ನಾಟಕ ಸರ್ಕಾರದಿಂದ ಈಗಾಗಲೇ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಸಂಬಂಧದ ಬಗ್ಗೆ ಹಾಗೂ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳ ಅನುಷ್ಠಾನದ ಕುರಿತು ದಿನಾಂಕ 30.08.2022 ರಂದು ಸುತ್ತೋಲೆಯನ್ನು ಹೊರಡಿಸಲಾಗಿರುತ್ತದೆ. ಸುತ್ತೋಲೆಯಂತೆ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾ‌ಲ್ ಗಳಲ್ಲಿ ಬಲೂನ್‌ಗಳು, ಬಲೂನ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‌ಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‌ಗಳು, ಪ್ಲಾಸ್ಟಿಕ್ ಐಸ್ ಕ್ರೀಮ್ ಸ್ಟಿಕ್‌ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೆರೀನ್ (ಥರ್ಮೋಕೋಲ್) ಗಳನ್ನು ಬಳಸದಂತೆ ನಿಗಾವಹಿಸುವುದು.

ಪ್ಲಾಸ್ಟಿಕ್ ನಿಷೇಧ

ಎಲ್ಲಾ ರೀತಿಯ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ಗಳು, ಪ್ಲಾಸ್ಟಿಕ್ ಧ್ವಜಗಳು, ಅಂಟಿಕೊಳ್ಳುವ ಫಿಲ್ಮ್ ಗಳು, ಡೈನಿಂಗ್ ಟೇಬಲ್‌ನಲ್ಲಿ ಹರಡಲು ಬಳಸುವ ದಪ್ಪದ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳು, ಪ್ಲಾಸ್ಟಿಕ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಕಪ್‌ಗಳು ಮತ್ತು ಲೋಟಗಳು, ಫೋರ್ಕ್ ಗಳು, ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕುಗಳು, ಪ್ಲಾಸ್ಟಿಕ್ ಟ್ರೇಗಳು, ಸ್ವೀಟ್ ಬಾಕ್ಸ್‌ಗಳು / ಆಮಂತ್ರಣ ಪತ್ರಗಳು / ಸಿಗರೇಟ್ ಪ್ಯಾಕೆಟ್‌ಗಳ ಸುತ್ತ ಸುತ್ತುವ ಪದರ ಅಥವಾ ಪ್ಯಾಕಿಂಗ್ ಫಿಲ್ಮ್ ಗಳು ಮತ್ತು ಪ್ಲಾಸ್ಟಿಕ್ ಸ್ಟಿಕರ್‌ಗಳು, ನಿಷೇಧಿತವಾಗಿರುವ ಹಿನ್ನೆಲೆಯಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯದ ಎಲ್ಲಾ ನಗರಸಭೆ, ಪಾಲಿಕೆ, ಅಧಿಕಾರಿಗಳು, ಮಾರ್ಷಲ್‌ಗಳು ಹಾಗೂ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಳಸದಂತೆ ನಿಗಾವಹಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

3 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

4 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

4 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

8 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

10 hours ago