Categories: ಕೋಲಾರ

ಸ್ವಾತಂತ್ರ್ಯಕ್ಕಾಗಿ ಆರ್.ಎಸ್.ಎಸ್ ಕೊಡುಗೆ ಶೂನ್ಯ ಇದ್ದರೆ ಬಹಿರಂಗ ಪಡಿಸಲಿ: ಎನ್.ಅಂಬರೀಷ್

ಕೋಲಾರ: ಸ್ವಾತಂತ್ರಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಆರ್.ಎಸ್.ಎಸ್ ಸಂಘಟನೆಯ ೧೦ ಮಂದಿ ಹೆಸರನ್ನು ಫೆ.೧೭ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರೆದಿರುವ ಬಹಿರಂಗ ಸಭೆಯಲ್ಲಿ ಹೇಳಲಿ ಎಂದು ಆರ್‌ಎಸ್‌ಎಸ್ ನವರಿಗೆ ಕಾಂಗ್ರೆಸ್ ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಎನ್.ಅಂಬರೀಷ್ ಸವಾಲು ಹಾಕಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಸಂಘಟನೆಯಿಂದ ಸದಾ ಅಶಾಂತಿ ಸೃಷ್ಟಿಸುವ ಕೆಲಸವಾಗುತ್ತಿದೆ. ಧರ್ಮಧರ್ಮಗಳ ನಡುವೆ ಅಹಿಷ್ಣುತೆ ಹುಟ್ಟಿ ಹಾಕಲಾಗುತ್ತಿದೆ.

ಅಂತಹ ಸಂಘಟನೆಯ ದೇಶಭಕ್ತಿ ನೋಡಿ ಬಿಜೆಪಿ ಸೇರಿರುವ ಸಿ.ಟಿ.ರವಿ ಸದನದಲ್ಲಿ ಸದಾ ವಿವಾದಗಳನ್ನು ಮಾಡುತ್ತಿರುತ್ತಾರೆ. ಮೊದಲ ಅಧಿವೇಶದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನ ಪದ ಬಳಸಿದ್ದರು ಇದೀಗ ನಸೀರ್ ಅಹಮದ್ ಬಗ್ಗೆ ಮಾತನಾಡಿರುವುದು ಸರಿಯಲ್ಲ ಎಂದರು.

ಏನಾದರೂ ಪ್ರಶ್ನೆ ಇದ್ದರೆ ನೇರವಾಗಿ ಕೇಳಲಿ ಅದನ್ನು ಬಿಟ್ಟು ಮುಸ್ಲೀಮರನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿ ಮಾತನಾಡುವುದು ಸರಿಯಲ್ಲ. ಆರ್.ಎಸ್.ಎಸ್. ನೋಡಿ ಬೆಳೆದಿರುವ ಸಿ.ಟಿ.ರವಿ ಅವರಿಗೂ ಗಾಂಧಿ ತತ್ವ ನೋಡಿ ಬೆಳೆದಿರುವ ನಸೀರ್ ಅವರಿಗೂ ಸಾಕಷ್ಟು ವ್ಯತ್ಯಾಸವಿದೆ ಪ್ರಧಾನಿ ಬಗ್ಗೆ ಅಚಾತುರ್ಯವಾಗಿ ಮಾತನಾಡಿದ್ದಕ್ಕೆ ನಸೀರ್ ಅಹಮದ್ ವಿಷಾಧ ವ್ಯಕ್ತಪಡಿಸಿದ್ದಾರೆ, ಆದರೆ ನೀವು ಕ್ಷಮೆಯಾಚಿಸಿಲ್ಲ ಎಂದು ಅಸಮಧಾನ ಹೊರಹಾಕಿದ ಅವರು, ಆರ್.ಎಸ್.ಎಸ್. ಸಂಘಟನೆಯ ಬಗ್ಗೆ ಬೇಸರದಿಂದ ಹೊರ ಬಂದ ಎ.ಕೆ.ಸುಬ್ಬಯ್ಯರಂತೆ ನೀವೂ ಸಹ ಹೊರಬರುತ್ತೀರಿ ಎಂದು ಹೇಳಿದರು.

ಮುಖಂಡ ಅನ್ವರ್ ಪಾಷ ಮಾತನಾಡಿ, ಸದನದಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಎಂಎಲ್ಸಿ ನಸೀರ್ ಅಹಮದ್ ಅವರು ಮಾತನಾಡಿದಾಗ ಸಿ.ಟಿ.ರವಿ ಕಾಲು ಕೆರೆದುಕೊಂಡು ಜಗಳ ಮಾಡಿದ್ದಲ್ಲದೆ ಮುಸ್ಲಿಂ ಸಮುದಾಯ ಗುರಿ ಮಾಡಿಕೊಂಡು ಮಾತನಾಡುತ್ತಾರೆ. ಆದರೆ ಅವರಿಗೆ ದೇಶದ ಪ್ರಗತಿ ಮತ್ತು ಸದ್ಯ ಆಗುತ್ತಿರುವ ಅನಾಹುತ ಬಗ್ಗೆ ಮಾತನಾಡುವ ನೈತಿಕ ಕಾಳಜಿ ಇಲ್ಲವೆಂದು ಕಿಡಿಕಾರಿದರು.

ಆರ್ ಎಸ್ ಎಸ್ ದೇಶಭಕ್ತಿ ನೋಡಿ ನಾನು ಬಿಜೆಪಿಗೆ ಸೇರಿದೆ ಅಂತೀರಿ. ಬಿಜೆಪಿಯದ್ದು ಯಾವ ದೇಶಭಕ್ತಿ ? ಆರ್‌ಎಸ್‌ಎಸ್ ಕೊಡುಗೆ ಏನು ದೇಶಕ್ಕೆ. ಅಮಿತ್ ಶಾ ಈ ಹಿಂದೆ ವಿವಾದಾತ್ಮಕವಾಗಿ ಮಾತನಾಡಿದಾಗ, ನ್ಯಾಯಾಲಯದಲ್ಲಿ ನ್ಯಾಯಾಧೀಶರಿಗೆ ಶೂ ಎಸೆದಾಗ ಯಾಕೆ ಮಾತನಾಡಲಿಲ್ಲ. ದೇಶ ಭಕ್ತಿ ಹೆಸರಿನಲ್ಲಿ ಬೂಟಾಟಿಕೆ ಮಾಡುತ್ತೀರಾ ಎಂದು ಪ್ರಶ್ನಿಸಿದರು.

ಇನ್ನು ಮಾಜಿ ಸಂಸದ ಎಸ್.ಮುನಿಸ್ವಾಮಿಯವರೇ ಧರ್ಮಾಧಾರಿತ, ಕೋಮುವಾದದ ರಾಜಕಾರಣ ಬಂದ ಮೇಲೆ ನಸೀರ್ ಅಹಮದ್ ಇಲ್ಲಿ ಶಾಸಕರಾಗಿಲ್ಲ. ಶಾಸಕ, ಸಚಿವರಾಗಿದ್ದಾಗ ಸಾಕಷ್ಟು ಕೊಡುಗೆ ನೀಡಿದ್ದರು. ಅದನ್ನು ಅರಿಯದೆ ನಸೀರ್ ಅಹಮದ್ ಕೊಡುಗೆ ಏನು ಎಂದು ಪ್ರಶ್ನೆ ಮಾಡುತ್ತೀರಾ. ಮೊದಲು ಆ ವಿಚಾರ ತಿಳಿದುಕೊಳ್ಳಿ ಎಂದರು.

ರಾಜ್ಯದಲ್ಲಿ ನಸೀರ್‌ಅಹಮದ್ ಎಂದರೆ ನಮ್ಮ ಸಮುದಾಯ ಅಲ್ಲದೆ ಸಮಾನ ಮನಸ್ಕರಿಗೂ ಕೊಡುಗೆ ನೀಡಿದ್ದಾರೆ. ವೈಯಕ್ತಿಕ ಟೀಕೆಗಳಿಗೆ ಇನ್ನಾದರೂ ಕಡಿವಾಣ ಹಾಕಿಕೊಳ್ಳಿ ಎಂದು ಸಲಹೆ ನೀಡಿ ಎಂದ ಅವರು, ಮೋದಿಯವರದ್ದು ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಅಲ್ಲ ಅದು ಸಬ್ ಕಾ ವಿನಾಶ್ ಎಂದು ಲೇವಡಿ ಮಾಡಿದರು.

ಮುಖಂಡ ಚಂದ್ರಮೌಳಿ ಮಾತನಾಡಿ, ಎಸ್.ಮುನಿಸ್ವಾಮಿ ಅಂತಹವರು ಒಬ್ಬರಲ್ಲ ೧೦ ನಾಯಕರು ಬಂದರೂ ನಸೀರ್ ಅಹಮದ್ ಅವರ ನೆರಳನ್ನು ತಾಕಲು ಆಗಲ್ಲ. ಆದರೂ ಬಾಯಿಗೆ ಬಂದಂತೆ ಮಾತನಾಡುತ್ತಿದ್ದು, ಇನ್ನಾದರೂ ಬಿಡಿ ಎಂದರು.

ಸುದ್ದಿಗೋಷ್ಠಿಯಲ್ಲಿ ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ನಗರಸಭೆ ಮಾಜಿ ಅಧ್ಯಕ್ಷ ಅಫ್ರೋಜ್ ಪಾಷ, ಹಿರಿಯ ಮುಖಂಡರಾದ ಶ್ರೀಕೃಷ್ಣ, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಕಠಾರಿಪಾಳ್ಯ ನರೇಂದ್ರ ಬಾಬು(ಗಂಗಣ್ಣ), ಸಲ್ಲಾವುದ್ದೀನ್ ಬಾಬು, ಖಾದ್ರಿಪುರ ಬಾಬು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಆಫ್ರೀದ್, ರಾಜ್ಯ ಪ್ರಧಾನ ಕಾರ್ಯದರ್ಶಿ ಭರತ್ ರಾಯ್ ಇದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

53 minutes ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago