ಕೋಲಾರ : ಸ್ವಾತಂತ್ರ್ಯವಾಗಿ ಬದುಕುವ ದಾರಿಯನ್ನ, ಹೆಣ್ಣು ಮಕ್ಕಳಿಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನ ಸರ್ಕಾರಿ ಶಾಲೆಗಳು ಕಲಿಸುತ್ತವೆ ಎಂದು ಶಿಕ್ಷಕ ಇಂದ್ರ ಕುಮಾರ್ ಹೇಳಿದರು.
ನಗರದ ಸರ್ಕಾರಿ ಪ್ರೌಢಶಾಲೆ ಅಣ್ಣಿಹಳ್ಳಿಯಲ್ಲಿ 2006-07ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳು ಎಲ್ಲರಿಗೂ ಉಚಿತವಾಗಿ ಶಿಕ್ಷಣ ನೀಡುವುದರಿಂದ ಬಡ ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಲು ಸಹಕಾರಿಯಾಗಲಿದೆ. ನನಗೆ ಕೆಲಸ ಸಿಕ್ಕಾಗಲು ಇಷ್ಟೊಂದು ಖುಷಿಯಾಗಲಿಲ್ಲ, ಈ ದಿನ ಅದಕ್ಕೆಲ್ಲ ಮೀರಿದ ಖುಷಿ ಸಿಕ್ಕಿದೆ ಎಂದು ಹರ್ಷವನ್ನು ವ್ಯಕ್ತಪಡಿಸಿದ್ದರು.
ಶಾಲೆಯ ಅಂದಿನ ಮುಖ್ಯ ಶಿಕ್ಷಕರಾದ ನರಸಿಂಹಯ್ಯ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಜಯವನ್ನು ಸಾಧಿಸಲು ಶಿಸ್ತು ಮುಖ್ಯ. ಓದಿರುವೆ ಎಂಬುದು ಮುಖ್ಯ ಅಲ್ಲ, ಸತ್ಪ್ರಜೆಗಳಾಗಿ ಬದುಕುವುದು ಮುಖ್ಯ. ಸುಮಾರು 17 ವರ್ಷಗಳ ಹಿಂದೆ ಓದಿದ ನೀವುಗಳು ಎಲ್ಲಾ ಗುರುಗಳನ್ನು ಸ್ಮರಿಸಿ, ಈಗಲೂ ಒಗ್ಗಟ್ಟಿನಿಂದ, ಕೆಲ ವಿದ್ಯಾರ್ಥಿಗಳು ವಿವಾಹ ವಾಗಿದ್ದರೂ ಸಹ ಸ್ನೇಹಿತರೊಂದಿಗೆ ಸೇರಿರುವುದು, ಒಂದೇ ಸರದಿಂದ ಕಳಚಿ ಹೋದ ಮಣಿಗಳನ್ನು ಮತ್ತೆ ಹುಡುಕಾಡಿ ಪೋಣಿಸುವ ಕಾರ್ಯಕ್ಕೆ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.
ಎಲ್ಲಾ ಗುರುವೃಂದದವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳ ನೀಡಿದ ಕಿರುಕಾಣಿಕೆ ಸ್ವೀಕರಿಸಿ, ಗುರು ಶಿಷ್ಯರ ಬಾಂಧವ್ಯ ಶಾಶ್ವತ ಎಂಬುದು ಸಾಬೀತುಪಡಿಸಲಾಯಿತು.
ಕಾರ್ಯಕ್ರಮದಲ್ಲಿ 2006-07ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿದ ವಿಜ್ಞಾನ ಶಿಕ್ಷಕರಾದ ಅಪ್ರೋಚ್ ಸುಲ್ತಾನ್ ಮೇಡಂ(AS), ಗಣಿತ ಶಿಕ್ಷಕರಾದ ಸುಜಾತ, ಸಮಾಜ ವಿಜ್ಞಾನ ಶಿಕ್ಷಕರಾದ ಅನ್ನಪೂರ್ಣ, ಕನ್ನಡ ಶಿಕ್ಷಕರಾದ ಬಿ.ಎಂ.ಪುಷ್ಪಲತಾ, ಹಿಂದಿ ಭಾಷಾ ಶಿಕ್ಷಕರಾದ, ಕೆ.ವೆಂಕಟೇಶ್, ದೈಹಿಕ ಶಿಕ್ಷಣ ಶಿಕ್ಷಕರಾದ ಅನಿತಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…