ಕೋಲಾರ : ಸ್ವಾತಂತ್ರ್ಯವಾಗಿ ಬದುಕುವ ದಾರಿಯನ್ನ, ಹೆಣ್ಣು ಮಕ್ಕಳಿಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನ ಸರ್ಕಾರಿ ಶಾಲೆಗಳು ಕಲಿಸುತ್ತವೆ ಎಂದು ಶಿಕ್ಷಕ ಇಂದ್ರ ಕುಮಾರ್ ಹೇಳಿದರು.
ನಗರದ ಸರ್ಕಾರಿ ಪ್ರೌಢಶಾಲೆ ಅಣ್ಣಿಹಳ್ಳಿಯಲ್ಲಿ 2006-07ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳು ಎಲ್ಲರಿಗೂ ಉಚಿತವಾಗಿ ಶಿಕ್ಷಣ ನೀಡುವುದರಿಂದ ಬಡ ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಲು ಸಹಕಾರಿಯಾಗಲಿದೆ. ನನಗೆ ಕೆಲಸ ಸಿಕ್ಕಾಗಲು ಇಷ್ಟೊಂದು ಖುಷಿಯಾಗಲಿಲ್ಲ, ಈ ದಿನ ಅದಕ್ಕೆಲ್ಲ ಮೀರಿದ ಖುಷಿ ಸಿಕ್ಕಿದೆ ಎಂದು ಹರ್ಷವನ್ನು ವ್ಯಕ್ತಪಡಿಸಿದ್ದರು.
ಶಾಲೆಯ ಅಂದಿನ ಮುಖ್ಯ ಶಿಕ್ಷಕರಾದ ನರಸಿಂಹಯ್ಯ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಜಯವನ್ನು ಸಾಧಿಸಲು ಶಿಸ್ತು ಮುಖ್ಯ. ಓದಿರುವೆ ಎಂಬುದು ಮುಖ್ಯ ಅಲ್ಲ, ಸತ್ಪ್ರಜೆಗಳಾಗಿ ಬದುಕುವುದು ಮುಖ್ಯ. ಸುಮಾರು 17 ವರ್ಷಗಳ ಹಿಂದೆ ಓದಿದ ನೀವುಗಳು ಎಲ್ಲಾ ಗುರುಗಳನ್ನು ಸ್ಮರಿಸಿ, ಈಗಲೂ ಒಗ್ಗಟ್ಟಿನಿಂದ, ಕೆಲ ವಿದ್ಯಾರ್ಥಿಗಳು ವಿವಾಹ ವಾಗಿದ್ದರೂ ಸಹ ಸ್ನೇಹಿತರೊಂದಿಗೆ ಸೇರಿರುವುದು, ಒಂದೇ ಸರದಿಂದ ಕಳಚಿ ಹೋದ ಮಣಿಗಳನ್ನು ಮತ್ತೆ ಹುಡುಕಾಡಿ ಪೋಣಿಸುವ ಕಾರ್ಯಕ್ಕೆ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.
ಎಲ್ಲಾ ಗುರುವೃಂದದವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳ ನೀಡಿದ ಕಿರುಕಾಣಿಕೆ ಸ್ವೀಕರಿಸಿ, ಗುರು ಶಿಷ್ಯರ ಬಾಂಧವ್ಯ ಶಾಶ್ವತ ಎಂಬುದು ಸಾಬೀತುಪಡಿಸಲಾಯಿತು.
ಕಾರ್ಯಕ್ರಮದಲ್ಲಿ 2006-07ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿದ ವಿಜ್ಞಾನ ಶಿಕ್ಷಕರಾದ ಅಪ್ರೋಚ್ ಸುಲ್ತಾನ್ ಮೇಡಂ(AS), ಗಣಿತ ಶಿಕ್ಷಕರಾದ ಸುಜಾತ, ಸಮಾಜ ವಿಜ್ಞಾನ ಶಿಕ್ಷಕರಾದ ಅನ್ನಪೂರ್ಣ, ಕನ್ನಡ ಶಿಕ್ಷಕರಾದ ಬಿ.ಎಂ.ಪುಷ್ಪಲತಾ, ಹಿಂದಿ ಭಾಷಾ ಶಿಕ್ಷಕರಾದ, ಕೆ.ವೆಂಕಟೇಶ್, ದೈಹಿಕ ಶಿಕ್ಷಣ ಶಿಕ್ಷಕರಾದ ಅನಿತಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…