ಕೋಲಾರ : ಸ್ವಾತಂತ್ರ್ಯವಾಗಿ ಬದುಕುವ ದಾರಿಯನ್ನ, ಹೆಣ್ಣು ಮಕ್ಕಳಿಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನ ಸರ್ಕಾರಿ ಶಾಲೆಗಳು ಕಲಿಸುತ್ತವೆ ಎಂದು ಶಿಕ್ಷಕ ಇಂದ್ರ ಕುಮಾರ್ ಹೇಳಿದರು.
ನಗರದ ಸರ್ಕಾರಿ ಪ್ರೌಢಶಾಲೆ ಅಣ್ಣಿಹಳ್ಳಿಯಲ್ಲಿ 2006-07ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳು ಎಲ್ಲರಿಗೂ ಉಚಿತವಾಗಿ ಶಿಕ್ಷಣ ನೀಡುವುದರಿಂದ ಬಡ ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಲು ಸಹಕಾರಿಯಾಗಲಿದೆ. ನನಗೆ ಕೆಲಸ ಸಿಕ್ಕಾಗಲು ಇಷ್ಟೊಂದು ಖುಷಿಯಾಗಲಿಲ್ಲ, ಈ ದಿನ ಅದಕ್ಕೆಲ್ಲ ಮೀರಿದ ಖುಷಿ ಸಿಕ್ಕಿದೆ ಎಂದು ಹರ್ಷವನ್ನು ವ್ಯಕ್ತಪಡಿಸಿದ್ದರು.
ಶಾಲೆಯ ಅಂದಿನ ಮುಖ್ಯ ಶಿಕ್ಷಕರಾದ ನರಸಿಂಹಯ್ಯ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಜಯವನ್ನು ಸಾಧಿಸಲು ಶಿಸ್ತು ಮುಖ್ಯ. ಓದಿರುವೆ ಎಂಬುದು ಮುಖ್ಯ ಅಲ್ಲ, ಸತ್ಪ್ರಜೆಗಳಾಗಿ ಬದುಕುವುದು ಮುಖ್ಯ. ಸುಮಾರು 17 ವರ್ಷಗಳ ಹಿಂದೆ ಓದಿದ ನೀವುಗಳು ಎಲ್ಲಾ ಗುರುಗಳನ್ನು ಸ್ಮರಿಸಿ, ಈಗಲೂ ಒಗ್ಗಟ್ಟಿನಿಂದ, ಕೆಲ ವಿದ್ಯಾರ್ಥಿಗಳು ವಿವಾಹ ವಾಗಿದ್ದರೂ ಸಹ ಸ್ನೇಹಿತರೊಂದಿಗೆ ಸೇರಿರುವುದು, ಒಂದೇ ಸರದಿಂದ ಕಳಚಿ ಹೋದ ಮಣಿಗಳನ್ನು ಮತ್ತೆ ಹುಡುಕಾಡಿ ಪೋಣಿಸುವ ಕಾರ್ಯಕ್ಕೆ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.
ಎಲ್ಲಾ ಗುರುವೃಂದದವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳ ನೀಡಿದ ಕಿರುಕಾಣಿಕೆ ಸ್ವೀಕರಿಸಿ, ಗುರು ಶಿಷ್ಯರ ಬಾಂಧವ್ಯ ಶಾಶ್ವತ ಎಂಬುದು ಸಾಬೀತುಪಡಿಸಲಾಯಿತು.
ಕಾರ್ಯಕ್ರಮದಲ್ಲಿ 2006-07ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿದ ವಿಜ್ಞಾನ ಶಿಕ್ಷಕರಾದ ಅಪ್ರೋಚ್ ಸುಲ್ತಾನ್ ಮೇಡಂ(AS), ಗಣಿತ ಶಿಕ್ಷಕರಾದ ಸುಜಾತ, ಸಮಾಜ ವಿಜ್ಞಾನ ಶಿಕ್ಷಕರಾದ ಅನ್ನಪೂರ್ಣ, ಕನ್ನಡ ಶಿಕ್ಷಕರಾದ ಬಿ.ಎಂ.ಪುಷ್ಪಲತಾ, ಹಿಂದಿ ಭಾಷಾ ಶಿಕ್ಷಕರಾದ, ಕೆ.ವೆಂಕಟೇಶ್, ದೈಹಿಕ ಶಿಕ್ಷಣ ಶಿಕ್ಷಕರಾದ ಅನಿತಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…