ಕೋಲಾರ : ಸ್ವಾತಂತ್ರ್ಯವಾಗಿ ಬದುಕುವ ದಾರಿಯನ್ನ, ಹೆಣ್ಣು ಮಕ್ಕಳಿಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನ ಸರ್ಕಾರಿ ಶಾಲೆಗಳು ಕಲಿಸುತ್ತವೆ ಎಂದು ಶಿಕ್ಷಕ ಇಂದ್ರ ಕುಮಾರ್ ಹೇಳಿದರು.
ನಗರದ ಸರ್ಕಾರಿ ಪ್ರೌಢಶಾಲೆ ಅಣ್ಣಿಹಳ್ಳಿಯಲ್ಲಿ 2006-07ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳು ಎಲ್ಲರಿಗೂ ಉಚಿತವಾಗಿ ಶಿಕ್ಷಣ ನೀಡುವುದರಿಂದ ಬಡ ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಲು ಸಹಕಾರಿಯಾಗಲಿದೆ. ನನಗೆ ಕೆಲಸ ಸಿಕ್ಕಾಗಲು ಇಷ್ಟೊಂದು ಖುಷಿಯಾಗಲಿಲ್ಲ, ಈ ದಿನ ಅದಕ್ಕೆಲ್ಲ ಮೀರಿದ ಖುಷಿ ಸಿಕ್ಕಿದೆ ಎಂದು ಹರ್ಷವನ್ನು ವ್ಯಕ್ತಪಡಿಸಿದ್ದರು.
ಶಾಲೆಯ ಅಂದಿನ ಮುಖ್ಯ ಶಿಕ್ಷಕರಾದ ನರಸಿಂಹಯ್ಯ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಜಯವನ್ನು ಸಾಧಿಸಲು ಶಿಸ್ತು ಮುಖ್ಯ. ಓದಿರುವೆ ಎಂಬುದು ಮುಖ್ಯ ಅಲ್ಲ, ಸತ್ಪ್ರಜೆಗಳಾಗಿ ಬದುಕುವುದು ಮುಖ್ಯ. ಸುಮಾರು 17 ವರ್ಷಗಳ ಹಿಂದೆ ಓದಿದ ನೀವುಗಳು ಎಲ್ಲಾ ಗುರುಗಳನ್ನು ಸ್ಮರಿಸಿ, ಈಗಲೂ ಒಗ್ಗಟ್ಟಿನಿಂದ, ಕೆಲ ವಿದ್ಯಾರ್ಥಿಗಳು ವಿವಾಹ ವಾಗಿದ್ದರೂ ಸಹ ಸ್ನೇಹಿತರೊಂದಿಗೆ ಸೇರಿರುವುದು, ಒಂದೇ ಸರದಿಂದ ಕಳಚಿ ಹೋದ ಮಣಿಗಳನ್ನು ಮತ್ತೆ ಹುಡುಕಾಡಿ ಪೋಣಿಸುವ ಕಾರ್ಯಕ್ಕೆ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.
ಎಲ್ಲಾ ಗುರುವೃಂದದವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳ ನೀಡಿದ ಕಿರುಕಾಣಿಕೆ ಸ್ವೀಕರಿಸಿ, ಗುರು ಶಿಷ್ಯರ ಬಾಂಧವ್ಯ ಶಾಶ್ವತ ಎಂಬುದು ಸಾಬೀತುಪಡಿಸಲಾಯಿತು.
ಕಾರ್ಯಕ್ರಮದಲ್ಲಿ 2006-07ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿದ ವಿಜ್ಞಾನ ಶಿಕ್ಷಕರಾದ ಅಪ್ರೋಚ್ ಸುಲ್ತಾನ್ ಮೇಡಂ(AS), ಗಣಿತ ಶಿಕ್ಷಕರಾದ ಸುಜಾತ, ಸಮಾಜ ವಿಜ್ಞಾನ ಶಿಕ್ಷಕರಾದ ಅನ್ನಪೂರ್ಣ, ಕನ್ನಡ ಶಿಕ್ಷಕರಾದ ಬಿ.ಎಂ.ಪುಷ್ಪಲತಾ, ಹಿಂದಿ ಭಾಷಾ ಶಿಕ್ಷಕರಾದ, ಕೆ.ವೆಂಕಟೇಶ್, ದೈಹಿಕ ಶಿಕ್ಷಣ ಶಿಕ್ಷಕರಾದ ಅನಿತಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…