ಕೋಲಾರ : ಸ್ವಾತಂತ್ರ್ಯವಾಗಿ ಬದುಕುವ ದಾರಿಯನ್ನ, ಹೆಣ್ಣು ಮಕ್ಕಳಿಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನ ಸರ್ಕಾರಿ ಶಾಲೆಗಳು ಕಲಿಸುತ್ತವೆ ಎಂದು ಶಿಕ್ಷಕ ಇಂದ್ರ ಕುಮಾರ್ ಹೇಳಿದರು.
ನಗರದ ಸರ್ಕಾರಿ ಪ್ರೌಢಶಾಲೆ ಅಣ್ಣಿಹಳ್ಳಿಯಲ್ಲಿ 2006-07ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳು ಎಲ್ಲರಿಗೂ ಉಚಿತವಾಗಿ ಶಿಕ್ಷಣ ನೀಡುವುದರಿಂದ ಬಡ ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಲು ಸಹಕಾರಿಯಾಗಲಿದೆ. ನನಗೆ ಕೆಲಸ ಸಿಕ್ಕಾಗಲು ಇಷ್ಟೊಂದು ಖುಷಿಯಾಗಲಿಲ್ಲ, ಈ ದಿನ ಅದಕ್ಕೆಲ್ಲ ಮೀರಿದ ಖುಷಿ ಸಿಕ್ಕಿದೆ ಎಂದು ಹರ್ಷವನ್ನು ವ್ಯಕ್ತಪಡಿಸಿದ್ದರು.
ಶಾಲೆಯ ಅಂದಿನ ಮುಖ್ಯ ಶಿಕ್ಷಕರಾದ ನರಸಿಂಹಯ್ಯ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಜಯವನ್ನು ಸಾಧಿಸಲು ಶಿಸ್ತು ಮುಖ್ಯ. ಓದಿರುವೆ ಎಂಬುದು ಮುಖ್ಯ ಅಲ್ಲ, ಸತ್ಪ್ರಜೆಗಳಾಗಿ ಬದುಕುವುದು ಮುಖ್ಯ. ಸುಮಾರು 17 ವರ್ಷಗಳ ಹಿಂದೆ ಓದಿದ ನೀವುಗಳು ಎಲ್ಲಾ ಗುರುಗಳನ್ನು ಸ್ಮರಿಸಿ, ಈಗಲೂ ಒಗ್ಗಟ್ಟಿನಿಂದ, ಕೆಲ ವಿದ್ಯಾರ್ಥಿಗಳು ವಿವಾಹ ವಾಗಿದ್ದರೂ ಸಹ ಸ್ನೇಹಿತರೊಂದಿಗೆ ಸೇರಿರುವುದು, ಒಂದೇ ಸರದಿಂದ ಕಳಚಿ ಹೋದ ಮಣಿಗಳನ್ನು ಮತ್ತೆ ಹುಡುಕಾಡಿ ಪೋಣಿಸುವ ಕಾರ್ಯಕ್ಕೆ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.
ಎಲ್ಲಾ ಗುರುವೃಂದದವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳ ನೀಡಿದ ಕಿರುಕಾಣಿಕೆ ಸ್ವೀಕರಿಸಿ, ಗುರು ಶಿಷ್ಯರ ಬಾಂಧವ್ಯ ಶಾಶ್ವತ ಎಂಬುದು ಸಾಬೀತುಪಡಿಸಲಾಯಿತು.
ಕಾರ್ಯಕ್ರಮದಲ್ಲಿ 2006-07ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿದ ವಿಜ್ಞಾನ ಶಿಕ್ಷಕರಾದ ಅಪ್ರೋಚ್ ಸುಲ್ತಾನ್ ಮೇಡಂ(AS), ಗಣಿತ ಶಿಕ್ಷಕರಾದ ಸುಜಾತ, ಸಮಾಜ ವಿಜ್ಞಾನ ಶಿಕ್ಷಕರಾದ ಅನ್ನಪೂರ್ಣ, ಕನ್ನಡ ಶಿಕ್ಷಕರಾದ ಬಿ.ಎಂ.ಪುಷ್ಪಲತಾ, ಹಿಂದಿ ಭಾಷಾ ಶಿಕ್ಷಕರಾದ, ಕೆ.ವೆಂಕಟೇಶ್, ದೈಹಿಕ ಶಿಕ್ಷಣ ಶಿಕ್ಷಕರಾದ ಅನಿತಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…