ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ, ಬೈಕ್ಗಳಲ್ಲಿ ಬಂದು ಡೆಡ್ಲಿ ವ್ಹೀಲಿಂಗ್ ನಡೆಸಿ ಹುಚ್ಚಾಟ ಮೆರೆದ ಘಟನೆ ನಡೆದಿದೆ.
ಬೆಂಗಳೂರಿನಿಂದ ನೂರಾರು ಬೈಕ್ಗಳಲ್ಲಿ ಬಂದಿದ್ದ ಯುವಕರು ಹೆದ್ದಾರಿಯಲ್ಲಿ ವಾಹನ ಸಂಚಾರದ ನಡುವೆಯೇ ವ್ಹೀಲಿಂಗ್ ನಡೆಸುತ್ತಿದ್ದು, ನಾ ಮುಂದು, ತಾ ಮುಂದು ಎಂಬಂತೆ ಅಪಾಯಕಾರಿ ಸಾಹಸಕ್ಕೆ ಮುಂದಾಗಿದ್ದರು. ಕೆಲವರು ನಂಬರ್ ಪ್ಲೇಟ್ ಇಲ್ಲದ ಬೈಕ್ಗಳಲ್ಲಿಯೂ ವ್ಹೀಲಿಂಗ್ ನಡೆಸಿರುವುದು ಕಂಡುಬಂದಿದೆ.
ಇದರ ಜೊತೆಗೆ ಕೆಲ ಆಟೋ ಚಾಲಕರೂ ಕೂಡ ಆಟೋಗಳನ್ನು ವ್ಹೀಲಿಂಗ್ ಮಾಡಿಸಿ ಹೆದ್ದಾರಿಯಲ್ಲಿ ಅಪಾಯಕಾರಿ ರೀತಿಯಲ್ಲಿ ಸಂಚರಿಸಿರುವುದು ಕಂಡುಬಂದಿದ್ದು, ಇತರೆ ವಾಹನ ಸವಾರರಲ್ಲಿ ಆತಂಕ ಮೂಡಿಸಿತು. ಹೆದ್ದಾರಿಯಲ್ಲಿ ಏಕಾಏಕಿ ವ್ಹೀಲಿಂಗ್ ನಡೆಸುತ್ತಿದ್ದರಿಂದ ಅಪಘಾತ ಸಂಭವಿಸುವ ಭೀತಿ ಎದುರಾಗಿತ್ತು.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ದೇವನಹಳ್ಳಿ ಸಂಚಾರಿ ಪೊಲೀಸರು ವ್ಹೀಲಿಂಗ್ ನಡೆಸುತ್ತಿದ್ದವರ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ. ಸುಮಾರು ಐದಾರು ಬೈಕ್ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸುವ ಪ್ರಕ್ರಿಯೆ ಕೈಗೊಂಡಿದ್ದಾರೆ.
ವಶಕ್ಕೆ ಪಡೆದ ಬೈಕ್ ವ್ಹೀಲರ್ಗಳಿಗೆ ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ಮುರುಳಿಧರ್ ಅವರು ಖಡಕ್ ಕ್ಲಾಸ್ ತೆಗೆದುಕೊಂಡಿದ್ದು, ಹೆದ್ದಾರಿಯಲ್ಲಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ವ್ಹೀಲಿಂಗ್ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.
ಸ್ವಾತಂತ್ರ್ಯ ದಿನದಂದು ಸಂಭ್ರಮಾಚರಣೆ ಹೆಸರಿನಲ್ಲಿ ಹೆದ್ದಾರಿಯಲ್ಲಿ ಅಪಾಯಕಾರಿ ವ್ಹೀಲಿಂಗ್ ನಡೆಸಿದವರ ವಿರುದ್ಧ ಪೊಲೀಸರು ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…