ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ, ಬೈಕ್‌ಗಳಲ್ಲಿ ಬಂದು ಡೆಡ್ಲಿ ವ್ಹೀಲಿಂಗ್ ನಡೆಸಿ ಹುಚ್ಚಾಟ ಮೆರೆದ ಘಟನೆ ನಡೆದಿದೆ.

ಬೆಂಗಳೂರಿನಿಂದ ನೂರಾರು ಬೈಕ್‌ಗಳಲ್ಲಿ ಬಂದಿದ್ದ ಯುವಕರು ಹೆದ್ದಾರಿಯಲ್ಲಿ ವಾಹನ ಸಂಚಾರದ ನಡುವೆಯೇ ವ್ಹೀಲಿಂಗ್ ನಡೆಸುತ್ತಿದ್ದು, ನಾ ಮುಂದು, ತಾ ಮುಂದು ಎಂಬಂತೆ ಅಪಾಯಕಾರಿ ಸಾಹಸಕ್ಕೆ ಮುಂದಾಗಿದ್ದರು. ಕೆಲವರು ನಂಬರ್ ಪ್ಲೇಟ್ ಇಲ್ಲದ ಬೈಕ್‌ಗಳಲ್ಲಿಯೂ ವ್ಹೀಲಿಂಗ್ ನಡೆಸಿರುವುದು ಕಂಡುಬಂದಿದೆ.

ಇದರ ಜೊತೆಗೆ ಕೆಲ ಆಟೋ ಚಾಲಕರೂ ಕೂಡ ಆಟೋಗಳನ್ನು ವ್ಹೀಲಿಂಗ್ ಮಾಡಿಸಿ ಹೆದ್ದಾರಿಯಲ್ಲಿ ಅಪಾಯಕಾರಿ ರೀತಿಯಲ್ಲಿ ಸಂಚರಿಸಿರುವುದು ಕಂಡುಬಂದಿದ್ದು, ಇತರೆ ವಾಹನ ಸವಾರರಲ್ಲಿ ಆತಂಕ ಮೂಡಿಸಿತು. ಹೆದ್ದಾರಿಯಲ್ಲಿ ಏಕಾಏಕಿ ವ್ಹೀಲಿಂಗ್ ನಡೆಸುತ್ತಿದ್ದರಿಂದ ಅಪಘಾತ ಸಂಭವಿಸುವ ಭೀತಿ ಎದುರಾಗಿತ್ತು.

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ದೇವನಹಳ್ಳಿ ಸಂಚಾರಿ ಪೊಲೀಸರು ವ್ಹೀಲಿಂಗ್ ನಡೆಸುತ್ತಿದ್ದವರ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ. ಸುಮಾರು ಐದಾರು ಬೈಕ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸುವ ಪ್ರಕ್ರಿಯೆ ಕೈಗೊಂಡಿದ್ದಾರೆ.

ವಶಕ್ಕೆ ಪಡೆದ ಬೈಕ್ ವ್ಹೀಲರ್‌ಗಳಿಗೆ ಸಂಚಾರಿ ಠಾಣೆಯ ಇನ್ಸ್‌ಪೆಕ್ಟರ್ ಮುರುಳಿಧರ್ ಅವರು ಖಡಕ್ ಕ್ಲಾಸ್ ತೆಗೆದುಕೊಂಡಿದ್ದು, ಹೆದ್ದಾರಿಯಲ್ಲಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ವ್ಹೀಲಿಂಗ್ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.

ಸ್ವಾತಂತ್ರ್ಯ ದಿನದಂದು ಸಂಭ್ರಮಾಚರಣೆ ಹೆಸರಿನಲ್ಲಿ ಹೆದ್ದಾರಿಯಲ್ಲಿ ಅಪಾಯಕಾರಿ ವ್ಹೀಲಿಂಗ್ ನಡೆಸಿದವರ ವಿರುದ್ಧ ಪೊಲೀಸರು ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

46 minutes ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

4 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

19 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago