“ಸ್ವಾತಂತ್ರ್ಯ ದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ”- ಪಿಎಂ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

79ನೇ ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ Narendra Modi ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್ ಎಸ್ ಎಸ್ ಅನ್ನು ಹಾಡಿ ಹೊಗಳಿರುವುದು ಸ್ವಾತಂತ್ರ್ಯಹೋರಾಟ, ರಾಷ್ಟ್ರಧ‍್ವಜ ಮತ್ತು ಸಂವಿಧಾನದ ನಿಜ ಆಶಯಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯಹೋರಾಟದಲ್ಲಿ ಎಂದೂ ಭಾಗವಹಿಸದೆ ಇದ್ದ ಮತ್ತು ಇತ್ತೀಚಿನ ವರೆಗೆ ನಮ್ಮ ಹೆಮ್ಮೆಯ ತ್ರಿವರ್ಣ ರಾಷ್ಟ್ರಧ್ವಜವನ್ನು ತಮ್ಮ ಕಚೇರಿಯಲ್ಲಿ ಆರೋಹಣ ಮಾಡಲು ನಿರಾಕರಿಸಿದ್ದ ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸುವ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪವಿತ್ರವಾದ ವೇದಿಕೆಯನ್ನು ನರೇಂದ್ರ ಮೋದಿ ಅವರು ತಮ್ಮ ಸ್ಥಾನದ ಮೂಲಕ ದುರುಪಯೋಗ ಮಾಡಿಕೊಂಡಿದ್ದಾರೆ. ಸ್ವತಂತ್ರ ಭಾರತದಲ್ಲಿ ಬಿಜೆಪಿ Bharatiya Janata Party (BJP) ಸೇರಿದಂತೆ ಯಾವ ಪಕ್ಷಗಳ ಪ್ರಧಾನ ಮಂತ್ರಿಯವರೂ ಈ ರೀತಿ ಸ್ವಾತಂತ್ರ್ಯೋತ್ಸವದ ವೇದಿಕೆಯನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿಲ್ಲ. ನರೇಂದ್ರ ಮೋದಿಯವರು ದೇಶದ ಜನ ಗೌರವಿಸುವ ಈ ವೇದಿಕೆಯ ಘನತೆ-ಗೌರವಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಆರ್ ಎಸ್ ಎಸ್ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆಗಳೇ ಇಲ್ಲ. ಅದೇ ರೀತಿ ನಾಗಪುರದಲ್ಲಿರುವ ಆರ್ ಎಸ್ ಎಸ್ ನ ಕೇಂದ್ರ ಕಚೇರಿಯಲ್ಲಿ 2001ರ ವರೆಗೆ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯೋತ್ಸವದ ದಿನವೂ ರಾಷ್ಟ್ರ ಧ್ವಜದ ಧ್ವಜಾರೋಹಣ ಮಾಡಿರಲೇ ಇಲ್ಲ. 2001ರಲ್ಲಿ ಧ್ವಜಾರೋಹಣ ಮಾಡಿದ್ದ ತಮ್ಮದೇ ಸಂಘಟನೆಯ ಯುವಕರ ವಿರುದ್ಧ ಆರ್ ಎಸ್ ಎಸ್ ದೂರು ಕೊಟ್ಟು ಜೈಲಿಗೆ ಅಟ್ಟಿತ್ತು ಎನ್ನುವುದನ್ನು ದೇಶದ ಜನ ಮರೆತಿಲ್ಲ. ಕೆಂಪುಕೋಟೆ ಭಾರತೀಯ ಜನತಾ ಪಕ್ಷದ ರಾಜಕೀಯ ವೇದಿಕೆ ಅಲ್ಲ, ಆ ಸ್ಥಳದಲ್ಲಿ ಪಕ್ಷಾತೀತವಾಗಿ ಆಚರಿಸಲಾಗುವ ಸ್ವಾತಂತ್ರ್ಯತ್ಸೋವದಲ್ಲಿ ಎಲ್ಲ ಜಾತಿ-ಧರ್ಮ, ಪಕ್ಷ-ಪಂಥಗಳ ಜನ ಭಾಗವಹಿಸುತ್ತಾರೆ. ಅಂತಹ ಪವಿತ್ರ ವೇದಿಕೆಯಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮಾತನಾಡದೆ ಆರ್ ಎಸ್ ಎಸ್ ಪ್ರಚಾರಕನಂತೆ ಮಾತನಾಡಿರುವುದು ದುರದೃಷ್ಟಕರ ಎಂದು ಆಕ್ರೋಶ ಹೊರಹಾಕಿದ್ದಾರೆ.

ಕಳೆದ ಹನ್ನೊಂದು ವರ್ಷಗಳಲ್ಲಿ ಸ್ವಾತಂತ್ರ್ಯೋತ್ಸವದ ದಿನ ಆರ್ ಎಸ್ ಎಸ್ ಅನ್ನು ನೆನಪು ಮಾಡಿಕೊಳ್ಳದ ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿ ಆರ್ ಎಸ್ ಎಸ್ ಸೇವೆಯನ್ನು ಸ್ಮರಿಸಿಕೊಂಡಿರುವುದು ಖಂಡಿತ ಅದರ ಮೇಲಿನ ಅಭಿಮಾನದಿಂದ ಅಲ್ಲ. ಇದಕ್ಕೆ ಮುಖ್ಯ ಕಾರಣ ಕುಸಿಯುತ್ತಿರುವ ಜನಪ್ರಿಯತೆಯಿಂದಾಗಿ ಅವರಲ್ಲಿ ಹುಟ್ಟಿರುವ ಅಭದ್ರತೆ. ಕಳೆದ ಚುನಾವಣೆಯಲ್ಲಿನ ಹಿನ್ನಡೆಯ ನಂತರ ಮೋದಿಯವರು ತಮ್ಮ ಮಾತೃಸಂಸ್ಥೆಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿಶ್ವದ ಅತಿ ದೊಡ್ಡ ಸರ್ಕಾರೇತರ ಸೇವಾ ಸಂಸ್ಥೆ ಎಂದು ನರೇಂದ್ರ ಮೋದಿ ಅವರು ಬಣ್ಣಿಸಿರುವ ಆರ್ ಎಸ್ ಎಸ್,  ಇಂದಿನ ವರೆಗೂ ಅಧಿಕೃತವಾಗಿ ನೋಂದಣಿಯಾಗದ, ಸಾರ್ವಜನಿಕ ದೇಣಿಗೆ ಸಂಗ್ರಹಿಸಿದರೂ ತೆರಿಗೆ ಪಾವತಿ ಮಾಡದ ಮತ್ತು ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ  ತೊಡಗಿರುವ ಸಂಘಟನೆಯಾಗಿದೆ ಎಂದಿದ್ದಾರೆ.

ಪಾರದರ್ಶಕತೆಯಾಗಲಿ, ಉತ್ತರದಾಯಿತ್ವವಾಗಲಿ ಇಲ್ಲದ ಆರ್ ಎಸ್ ಎಸ್ ರಹಸ್ಯ ಸಂಘಟನೆಯಾಗಿಯೇ ಕೆಲಸ ಮಾಡುತ್ತಿರುವುದನ್ನು ದೇಶದ ಜನತೆ ಗಮನಿಸದ್ದಾರೆ. ಕೋಮುವಾದವನ್ನೇ ಉಸಿರಾಗಿಸಿಕೊಂಡ ಆರ್ ಎಸ್ ಎಸ್ ಹಿಂದೂ ಧರ್ಮವನ್ನು ರಾಜಕೀಯ ಆಯುಧವಾಗಿ ಬಳಸಿಕೊಂಡು ಭಾರತೀಯರನ್ನು ಒಡೆದು ಹಾಕಿ ಭಾರತೀಯ ಜನತಾ ಪಕ್ಷವನ್ನು ರಾಜಕೀಯವಾಗಿ ಬಲಪಡಿಸಲು ಹಗಲು-ರಾತ್ರಿ ಶ್ರಮಿಸುತ್ತಿದೆ. ಇವರಿಗೆ ದೇಶದ ಬಗ್ಗೆಯಾಗಲಿ, ಹಿಂದೂ ಧರ್ಮದ ಬಗ್ಗೆಯಾಗಲಿ ಯಾವ ಪ್ರೀತಿ-ಅಭಿಮಾನ, ಬದ್ಧತೆಯಾಗಲಿ ಇಲ್ಲ ಎನ್ನುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

Ramesh Babu

Journalist

Recent Posts

ಕ್ಷಯ ಮುಕ್ತ ಭಾರತ ಅಭಿಯಾನ: ಬಾಶೆಟ್ಟಿಹಳ್ಳಿಯಲ್ಲಿ ಜಾಗೃತಿ, ತಂಬಾಕು ನಿಯಂತ್ರಣ ಕಾಯ್ದೆಯಡಿ ದಂಡ

ಬಾಶೆಟ್ಟಿಹಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡತುಮಕೂರು ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಸಹಭಾಗಿತ್ವದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮದಲ್ಲಿ ಕ್ಷಯ ಮುಕ್ತ ಭಾರತ…

27 minutes ago

ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ- ಪಿಡಿಒ ರಮೇಶ್

ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ,  ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…

6 hours ago

ಹಣದ ಹರಿವು

ಹೊರಹೋಗುವ ಸುಲಭ ದಾರಿಗಳು, ಒಳಬರುವ ಕಠಿಣ ಹಾದಿಗಳು....... ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು...... ಆಧುನಿಕತೆ…

7 hours ago

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

1 day ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

1 day ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago