ಸ್ವಾಮಿ ವಿವೇಕಾನಂದರು ಇಡೀ ಜಗತ್ತು ಕಂಡ ಶ್ರೇಷ್ಠ ತತ್ವಜ್ಞಾನಿ, ಧೀರ ಸನ್ಯಾಸಿ. ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತವನ್ನು ಅಜ್ಞಾನ, ಅಂಧಕಾರ, ಮೂಢನಂಬಿಕೆಯಿಂದ ಕೂಡಿದ ದೇಶವೆಂದು ಹೀಗೆಳೆಯುವಾಗ, ಜ್ಞಾನ, ಆಧ್ಯಾತ್ಮ ಚಿಂತನೆ ಮತ್ತು ಸಂಸ್ಕೃತಿಯಲ್ಲಿ ಎಲ್ಲಾ ದೇಶಗಳನ್ನು ಮೀರಿಸುವ ಶಕ್ತಿ ಭಾರತಕ್ಕಿದೆ ಎಂದು ಸಾಬೀತುಪಡಿಸಿ ಇಡೀ ಜಗತ್ತು ಭಾರತದ ಕಡೆ ಹೆಮ್ಮೆಯಿಂದ ನೋಡುವಂತ ಮಾಡಿದ ದಾರ್ಶನಿಕರು ಸ್ವಾಮಿ ವಿವೇಕಾನಂದರು ಎಂದು ಎಂ.ಎಸ್.ವಿ ಪಬ್ಲಿಕ್ ಶಾಲೆಯ ಸಂಸ್ಥಾಪಕರಾದ ಎ. ಸುಬ್ರಮಣ್ಯ ಹೇಳಿದರು.
ನಗರದ ಎಂ.ಎಸ್.ವಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರದಂದು ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಿ ಮಾತನಾಡಿದ ಅವರು, ಮಹಾತ್ಮರ ಚಿಂತನೆಗಳು ನಮಗೆ ಆದರ್ಶಪ್ರಾಯವಾಗಬೇಕು. ಭಾರತದಲ್ಲಿ ಯುವಕರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಎಲ್ಲರೂ ಅಳವಡಿಸಿಕೊಳ್ಳುವುದರ ಮೂಲಕ ಭಾರತ ವಿಶ್ವಗುರುವಾಗುವ ನಿಟ್ಟಿನಲ್ಲಿ ತಾವೆಲ್ಲಾ ಶ್ರದ್ಧೆ, ನಿಷ್ಠೆಯಿಂದ ವಿದ್ಯಾರ್ಜನೆ ಮಾಡಬೇಕೆಂದು ಹಿತವಚನ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಂದ ಭಾಷಣ, ಪ್ರತಿಜ್ಞಾವಿಧಿ ಬೋಧನೆ, ಹಾಡು ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಶಾಲೆಯ ಕಾರ್ಯದರ್ಶಿಗಳಾದ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್ ಎಸ್, ಟ್ರಸ್ಟಿ ನಯನಾ ಸ್ವರೂಪ್, ಪ್ರಾಂಶುಪಾಲೆ ರೆಮ್ಯಾ ಬಿ.ವಿ, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…