ಸ್ವಾಮಿ ವಿವೇಕಾನಂದರು ಇಡೀ ಜಗತ್ತು ಕಂಡ ಶ್ರೇಷ್ಠ ತತ್ವಜ್ಞಾನಿ, ಧೀರ ಸನ್ಯಾಸಿ. ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತವನ್ನು ಅಜ್ಞಾನ, ಅಂಧಕಾರ, ಮೂಢನಂಬಿಕೆಯಿಂದ ಕೂಡಿದ ದೇಶವೆಂದು ಹೀಗೆಳೆಯುವಾಗ, ಜ್ಞಾನ, ಆಧ್ಯಾತ್ಮ ಚಿಂತನೆ ಮತ್ತು ಸಂಸ್ಕೃತಿಯಲ್ಲಿ ಎಲ್ಲಾ ದೇಶಗಳನ್ನು ಮೀರಿಸುವ ಶಕ್ತಿ ಭಾರತಕ್ಕಿದೆ ಎಂದು ಸಾಬೀತುಪಡಿಸಿ ಇಡೀ ಜಗತ್ತು ಭಾರತದ ಕಡೆ ಹೆಮ್ಮೆಯಿಂದ ನೋಡುವಂತ ಮಾಡಿದ ದಾರ್ಶನಿಕರು ಸ್ವಾಮಿ ವಿವೇಕಾನಂದರು ಎಂದು ಎಂ.ಎಸ್.ವಿ ಪಬ್ಲಿಕ್ ಶಾಲೆಯ ಸಂಸ್ಥಾಪಕರಾದ ಎ. ಸುಬ್ರಮಣ್ಯ ಹೇಳಿದರು.
ನಗರದ ಎಂ.ಎಸ್.ವಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರದಂದು ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಿ ಮಾತನಾಡಿದ ಅವರು, ಮಹಾತ್ಮರ ಚಿಂತನೆಗಳು ನಮಗೆ ಆದರ್ಶಪ್ರಾಯವಾಗಬೇಕು. ಭಾರತದಲ್ಲಿ ಯುವಕರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಎಲ್ಲರೂ ಅಳವಡಿಸಿಕೊಳ್ಳುವುದರ ಮೂಲಕ ಭಾರತ ವಿಶ್ವಗುರುವಾಗುವ ನಿಟ್ಟಿನಲ್ಲಿ ತಾವೆಲ್ಲಾ ಶ್ರದ್ಧೆ, ನಿಷ್ಠೆಯಿಂದ ವಿದ್ಯಾರ್ಜನೆ ಮಾಡಬೇಕೆಂದು ಹಿತವಚನ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಂದ ಭಾಷಣ, ಪ್ರತಿಜ್ಞಾವಿಧಿ ಬೋಧನೆ, ಹಾಡು ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಶಾಲೆಯ ಕಾರ್ಯದರ್ಶಿಗಳಾದ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್ ಎಸ್, ಟ್ರಸ್ಟಿ ನಯನಾ ಸ್ವರೂಪ್, ಪ್ರಾಂಶುಪಾಲೆ ರೆಮ್ಯಾ ಬಿ.ವಿ, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…